
ತಿರುವನಂತಪುರಂ(ಅ.14): ಇಸ್ರೋ ಮಾಜಿ ವಿಜ್ಞಾನಿ ನಂಬಿ ನಾರಾಯಣನ್ ಅವರನ್ನು ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರ ವಿರುದ್ಧ ತಿರುವನಂತಪುರಂ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಎಡ ಪಕ್ಷಗಳು ಮುಂದಾಗಿವೆ.
ಜನರಿಂದ ಗೌರವಿಸಲ್ಪಡುವ ಅಭ್ಯರ್ಥಿಯೊಬ್ಬರನ್ನು ತರೂರ್ ವಿರುದ್ಧ ಕಣಕ್ಕಿಳಿಸಲು ಆಡಳಿತಾರೂಢ ಸಿಪಿಎಂ ಮತ್ತು ಸಿಪಿಐ ಪಕ್ಷಗಳು ಒಪ್ಪಿದ ಬೆನ್ನಲ್ಲೇ, ನಂಬಿ ನಾರಾಯಣನ್ ಅವರ ಹೆಸರು ಕೇಳಿಬಂದಿದೆ. ಆದರೆ, ಚುನಾವಣೆಯಲ್ಲಿ ಸ್ಪರ್ಧಿಸಲು ನಾರಾಯಣನ್ ಒಪ್ಪಿಗೆ ನೀಡಿಲ್ಲ ಎನ್ನಲಾಗಿದೆ.
24 ವರ್ಷಗಳಿಂದ ಗೂಡಚಾರಿಕೆ ಆರೋಪ ಎದುರಿಸುತ್ತಿದ್ದ ನಾರಾಯಣ್ ಇತ್ತೀಚೆಗಷ್ಟೇ ಖುಲಾಸೆಗೊಂಡಿದ್ದರು. ತರೂರ್ ವಿರುದ್ಧ ನಟ ಮೋಹನ್ಲಾಲ್ ಅವರನ್ನು ಕಣಕ್ಕೆ ಇಳಿಸಲು ಬಿಜೆಪಿ ಕೂಡಾ ಗಂಭೀರ ಚಿಂತನೆ ನಡೆಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.