ಅತೃಪ್ತ ಶಾಸಕರು ಬಿಜೆಪಿಗೆ? ಪಕ್ಷದಿಂದಲೇ ತೀವ್ರ ವಿರೋಧ

Published : Jul 11, 2019, 10:41 AM ISTUpdated : Jul 11, 2019, 11:38 AM IST
ಅತೃಪ್ತ ಶಾಸಕರು ಬಿಜೆಪಿಗೆ? ಪಕ್ಷದಿಂದಲೇ ತೀವ್ರ ವಿರೋಧ

ಸಾರಾಂಶ

ರೆಬೆಲ್ ಆಗಿ ರಾಜೀನಾಮೆ ನೀಡಿದ ಜೆಡಿಎಸ್ ಶಾಸಕರೋರ್ವರು ಬಿಜೆಪಿ ಸೇರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಪಕ್ಷಕ್ಕೆ ಸೇರಿಕೊಳ್ಳದಿರಲು ಮನವಿ ಮಾಡಲಾಗಿದೆ. 

ಬೆಂಗಳೂರು [ಜು.11] :   ರಾಜ್ಯ ರಾಜಕೀಯದಲ್ಲಿ ಹೈ ಡ್ರಾಮಾ ಮುಂದುವರಿದಿದೆ. ರಾಜೀನಾಮೆ ಪಟ್ಟಿ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ.  ಇತ್ತ ರಾಜೀನಾಮೆ ನೀಡಿದ ಕೆಲವರು ಬಿಜೆಪಿ ಸೇರ್ಪಡೆಗೆ ಒಲವು ತೋರುತ್ತಿದ್ದು, ಆದರೆ ಇದಕ್ಕೆ ಬಿಜೆಪಿಗರಿಂದ ವಿರೋಧ ವ್ಯಕ್ತವಾಗುತ್ತಿದೆ. 

ಮಹಾಲಕ್ಷ್ಮೀ ಲೇ ಔಟ್ ಕ್ಷೇತ್ರದ ಜೆಡಿಎಸ್ ಶಾಸಕ ಗೋಪಾಲಯ್ಯ ರಾಜೀನಾಮೆ ನೀಡಿ ಮುಂಬೈ ಸೇರಿಕೊಂಡಿದ್ದು,  ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಅವರ ಸೇರ್ಪಡೆಗೆ ಬಿಜೆಪಿ ನಾಯಕರೋರ್ವರು ವಿರೋಧಿಸಿದ್ದಾರೆ.  

ಕರ್ನಾಟಕ ರಾಜಕೀಯ ಪ್ರಹಸನದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಗೋಪಾಲಯ್ಯ ಬಿಜೆಪಿಗೆ ಬರುವುದು ಬೇಡವೆಂದು ಮಾಜೀ ಮೇಯರ್ ಬಿಜೆಪಿ ಮುಖಂಡ ಹರೀಶ್ ಹೇಳಿದ್ದು, ಅವರ ಸೇರ್ಪಡೆಗೆ ನಮ್ಮಿಂದ ತೀವ್ರ ವಿರೋಧವಿದೆ ಎಂದಿದ್ದಾರೆ. 

ನಮ್ಮ ನಾಯಕರಾದ ಬಿ.ಎಸ್ ಯಡಿಯೂರಪ್ಪ ಅವರ ಬಳಿ ಮನವಿ ಮಾಡಿದ್ದು, ಈ ಮೂಲಕ ಕಾರ್ಯಕರ್ತರ ಹಿತ ಕಾಪಾಡುವಂತೆ ಕೇಳಿಕೊಳ್ಳಲಾಗಿದೆ. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿಎಸ್ ವೈ ಸಕಾರಾತ್ಮಕವಾಗಿ ಸ್ಪಂದಿಸಿದ್ದಾಗಿ ಬಿಜೆಪಿಗ ಹರೀಶ್ ಹೇಳಿದ್ದಾರೆ.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Viral Video: ವೇದಿಕೆಯಲ್ಲೇ ಮಹಿಳಾ ವೈದ್ಯೆಯ ಹಿಜಾಬ್‌ ತೆಗೆಯಲು ಯತ್ನಿಸಿದ ಬಿಹಾರ ಸಿಎಂ ನಿತೀಶ್‌ ಕುಮಾರ್‌
ಅನುದಾನಿತ ಶಾಲೆಯಲ್ಲಿ 9ನೇ ಕ್ಲಾಸ್ ಹುಡ್ಗೀರ ಎಣ್ಣೆ ಪಾರ್ಟಿ; ವೈರಲ್ ವಿಡಿಯೋ ಆಧರಿಸಿ 6 ವಿದ್ಯಾರ್ಥಿನಿಯರು ಅಮಾನತು!