
ಬೆಂಗಳೂರು(ಅ.8): ದಶಕದ ನಂತರ ಪುನಾರಚನೆಯಾದ ರಾಜ್ಯ ಮಹಿಳಾ ಕಾಂಗ್ರೆಸ್ನಲ್ಲಿ ನಾಯಕರ ಪುತ್ರಿಯರಿಗೇ ಆದ್ಯತೆ ನೀಡಲಾಗಿದೆ.
ಮಾಜಿ ಸಚಿವೆ ರಾಣಿ ಸತೀಶ್ ಅಧ್ಯಕ್ಷೆಯಾಗಿದ್ದ ನಂತರ ಸಮಿತಿ ಪುನಾರಚನೆಯೇ ಆಗಿರಲಿಲ್ಲ. ಹೀಗಾಗಿ ಪಕ್ಷದ ಅಧ್ಯಕ್ಷ ಮತ್ತ್ತು ಕಾರ್ಯಾಧ್ಯಕ್ಷರ ಸೂಚನೆಯಂತೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಸಮಿತಿಯನ್ನು ಪುನಾರಚಿಸಿದ್ದು, ನೂತನ ಪದಾಕಾರಿಗಳ ಪಟ್ಟಿ ಪ್ರಕಟಿಸಿದ್ದಾರೆ.
ಹೊಸ ಪದಾಕಾರಿಗಳ ಪಟ್ಟಿಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾರೆಡ್ಡಿ (ಕಾರ್ಯದರ್ಶಿ), ಮಾಜಿ ಸಚಿವ ಮೋಟಮ್ಮ ಪುತ್ರಿ ನಯನಾ ಜವಾಹರ್ (ಪ್ರಧಾನ ಕಾರ್ಯದರ್ಶಿ), ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಪುತ್ರಿ ರೂಪಾ ಮುನಿಯಪ್ಪ (ಕೋಲಾರ ಜಿಲ್ಲಾ ಅಧ್ಯಕ್ಷೆ), ವಿಧಾನ ಪರಿಷತ್ ಮಾಜಿ ಸದಸ್ಯ ಪ್ರಕಾಶ್ ರಾಥೋಡ್ ಸಹೋದರಿ ಶೋಭಾ ರಾಥೋಡ್ (ಉಪಾಧ್ಯಕ್ಷೆ) ಸ್ಥಾನ ಪಡೆದಿದ್ದಾರೆ. ಅಷ್ಟೇ ಅಲ್ಲದೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ರ ಸಿದ್ದಾರ್ಥ ವಿದ್ಯಾಸಂಸ್ಥೆಯ ಉಪನ್ಯಾಸಕಿಯರಿಗೂ ಉಪಾಧ್ಯಕ್ಷ ಸ್ಥಾನ ಕಲ್ಪಿಸಲಾಗಿದೆ.
ಜಿಲ್ಲಾಧ್ಯಕ್ಷರು
ಬೆಂಗಳೂರು ಗ್ರಾಮಾಂತರ- ಎಂ.ಕಮಲಾಕ್ಷಿ ರಾಜಣ್ಣ, ಬೆಳಗಾವಿ ನಗರ-ವಿಜಯಾ ಎಸ್. ಹಿರೇಮಠ, ಬಳ್ಳಾರಿ ನಗರ- ಟಿ.ಪದ್ಮ, ಚಿಕ್ಕಮಗಳೂರು- ಕೆ.ಎಚ್. ವನಮಾಲಾ ದೇವರಾಜು, ಚಿತ್ರದುರ್ಗ- ಪಿ.ಕೆ. ಮೀನಾಕ್ಷಿ, ದಕ್ಷಿಣ ಕನ್ನಡ- ಶಾಲೆಟ್ಪಿಂಟೋ, ಧಾರವಾಡ ಗ್ರಾಮೀಣ- ಶೈಲಾ ವೆಂಕಟರೆಡ್ಡಿ ಕಮ್ಮರೆಡ್ಡಿ, ಹುಬ್ಬಳ್ಳಿ-ಧಾರವಾಡ ನಗರ- ಜಿ.ದೇವಕಿ ಯೋಗಣ್ಣ, ಕೋಲಾರ- ರೂಪಾ ಮುನಿಯಪ್ಪ, ಮಂಡ್ಯ-ಅಂಜನಾ ಶ್ರೀಕಾಂತ್, ರಾಯಚೂರು-ನಿರ್ಮಲಾ ಬೆನ್ನಿ ಮತ್ತು ರಾಮನಗರ- ಬಿ.ಸಿ. ಪಾರ್ವತಮ್ಮ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.