ಬಿಜೆಪಿಯಿಂದ ಪಕ್ಷಾಂತರಕ್ಕೆ ನಿರಂತರ ಒತ್ತಡ : ಕಾಂಗ್ರೆಸ್ ಮುಖಂಡ

Published : Jul 11, 2019, 08:48 AM IST
ಬಿಜೆಪಿಯಿಂದ ಪಕ್ಷಾಂತರಕ್ಕೆ ನಿರಂತರ ಒತ್ತಡ : ಕಾಂಗ್ರೆಸ್ ಮುಖಂಡ

ಸಾರಾಂಶ

ಬಿಜೆಪಿಯಿಂದ ನಿರಂತರವಾಗಿ ತಮಗೆ ಆಫರ್ ಬರುತ್ತಿದೆ ಎಂದು ಕಾಂಗ್ರೆಸ್  ಮುಖಂಡರೋರ್ವರು ಇದೀಗ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. 

ಬೆಳ್ತಂಗ​ಡಿ [ಜು.11] :  ಕ್ಷೇತ್ರದ ಜನರ ವಿಶ್ವಾಸಕ್ಕೆ ದ್ರೋಹ ಬಗೆದು ಹಣ, ಅಧಿಕಾರಕ್ಕೋಸ್ಕರ ಪಕ್ಷಾಂತರ ಮಾಡುವುದಿಲ್ಲ. ಅದರ ಕುರಿತು ಗಮನ ಕೊಡುವುದಿಲ್ಲ. ನನ್ನ ಗುರಿಯೇನಿದ್ದರೂ ಕ್ಷೇತ್ರದ ಅಭಿವೃದ್ಧಿ ಮಾತ್ರ ಎಂದು ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ ಶೃಂಗೇರಿಯ ಕಾಂಗ್ರೆಸ್‌ ಶಾಸಕ ರಾಜೇಗೌಡ ಸ್ಪಷ್ಪಪಡಿಸಿದ್ದಾರೆ. 

ಬಿಜೆಪಿಗೆ ಬರುವಂತೆ ನಿರಂತರ ಒತ್ತಡಗಳು, ಕರೆಗಳು ಬರುತ್ತಿದೆ. ಬಿಜೆಪಿಯ ಹಿರಿಯ ನಾಯಕರು ಕರೆ ಮಾಡಿ ಹಣ, ಅಧಿಕಾರ ಸೇರಿದಂತೆ ಎಲ್ಲ ರೀತಿಯ ಆಮಿಷಗಳನ್ನೂ ಹಾಕುತ್ತಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ಅದು ಹೆಚ್ಚಾಗಿದೆ. ಆದರೆ ತಾನು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದರು. ಬಿಜೆಪಿಯವರು ಅಧಿಕಾರಕ್ಕಾಗಿ ಯಾವ ಹಂತಕ್ಕೆ ಇಳಿಯಲೂ ಸಿದ್ಧರಾಗುತ್ತಿದ್ದಾರೆ. 

ಕರ್ನಾಟಕ ರಾಜಕೀಯ ಪ್ರಹಸನದ ಸುದ್ದಿಗಳಿಗೆ ಇಲ್ಲಿ ಕ್ಲಿಕ್ಕಿಸಿ

ಇದು ಪ್ರಜಾಪ್ರಭುತ್ವವನ್ನು ಅಣಕಿಸುವ ಕಾರ್ಯವಾಗಿದೆ. ಒಮ್ಮೆ ಚುನಾವಣೆಯಲ್ಲಿ ಗೆದ್ದವರು ಅವಧಿ ಮುಗಿಯುವವರೆಗೂ ಆ ಪಕ್ಷದಲ್ಲಿಯೇ ಉಳಿದುಕೊಳ್ಳಬೇಕು. ಅವಧಿ ಮುಗಿದು ಮುಂದಿನ ಚುನಾವಣೆಯ ಸಂದರ್ಭದಲ್ಲಿ ಪಕ್ಷಾಂತರ ಮಾಡುವುದಿದ್ದರೆ ಮಾಡಲಿ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಮಾದೇಶ್ವರ ದಯಬಾರದೆ..' ಯೂಟ್ಯೂಬ್‌ನಲ್ಲಿ ಟ್ರೆಂಡ್‌ ಆದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್‌ ಹಾಡು!
ರಾಜ್ಯಾದ್ಯಂತ ಎಲ್‌ಕೆಜಿ ಯಿಂದ ಪಿಯುಸಿವರೆಗೆ ಕಲಿಕಾ ಸಮಯದ ಅವಧಿ ಬದಲಾಯಿಸುವಂತೆ ಶಿಕ್ಷಣ ಇಲಾಖೆಗೆ ಮಕ್ಕಳ ಆಯೋಗ ಪತ್ರ