
ರಿಯಾದ್(ಅ.30): 'ಪುಸ್ತಕಗಳನ್ನು ಓದಿ ಬಡತನ ಕಲಿತಿಲ್ಲ ಬದಲಾಗಿ ರೈಲ್ವೆ ನಿಲ್ದಾಣದಲ್ಲಿ ನಿಜವಾದ ಬಡತನವನ್ನು ಅನುಭವಿಸಿ ಪಾಠ ಕಲಿತಿದ್ದೇನೆ..' ಇದು ಪ್ರಧಾನಿ ಮೋದಿ ಅವರ ಅಂತರಾತ್ಮದ ಸ್ಪಷ್ಟ ನುಡಿಗಳು.
2 ದಿನಗಳ ಸೌದಿ ಅರೇಬಿಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ತಮ್ಮ ಬಾಲ್ಯದ ಕಷ್ಟದ ದಿನಗಳನ್ನು ಮೆಲುಕು ಹಾಕಿದ್ದಾರೆ. ಬಡತನದ ಕಷ್ಟ ಮತ್ತು ನೋವುಗಳನ್ನು ತಾವು ಯಾವುದೇ ಪುಸ್ತಕ ಓದಿ ಕಲಿತಿಲ್ಲ, ಬದಲಾಗಿ ರೈಲು ನಿಲ್ದಾಣದಲ್ಲಿ ಸಾಕ್ಷಾತ್ ಅನುಭವಿಸಿ ಕಲಿತಿದ್ದೇನೆ ಎಂದು ಮೋದಿ ಹೇಳಿದ್ದಾರೆ.
ಮೋದಿ ಎಂದೂ ಟೀ ಮಾರಿಲ್ಲ, ಎಲ್ಲಾ ಗಿಮಿಕ್: ತೋಗಾಡಿಯಾ ತಪರಾಕಿ!
ತಾವು ಯಾವುದೇ ದೊಡ್ಡ ರಾಜಕೀಯ ಕುಟುಂಬದ ಹಿನ್ನಲೆಯಿಂದ ಬಂದವರಲ್ಲ ಎಂದಿರುವ ಪ್ರಧಾನಿ, ರೈಲು ನಿಲ್ದಾಣದಲ್ಲಿ ಚಹಾ ಮಾರುತ್ತಾ ಈ ಹಂತಕ್ಕೆ ಬಂದು ತಲುಪಿದ್ದೇನೆ ಎಂದು ಮೋದಿ ಹೇಳಿದರು.
ಇನ್ನು ಕೆಲವೇ ವರ್ಷಗಳಲ್ಲಿ ಭಾರತ ಬಡತನ ಮುಕ್ತವಾಗಲಿದೆ ಎಂದು ಭರವಸೆ ನೀಡಿದ ಪ್ರಧಾನಿ, ಬಡವರನ್ನು ಸಬಲರನ್ನಾಗಿ ಮಾಡುವ ಮೂಲಕ ಬಡತನಕ್ಕೆ ಇತಿಶ್ರೀ ಹಾಡಲಾಗುವುದು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.