
ಬೆಂಗಳೂರು (ಜ.24): ಸೋಲದೇವನಹಳ್ಳಿ ಬಳಿಯ ಬೀದನ ಪಾಳ್ಯ ಬಳಿ ನಿರಂತರವಾಗಿ ಹರಿಯತ್ತಿರುವ ನದಿ ನೀರಿನಿಂದ ಜನರು ಸಂಚರಿಸಲು ಕಷ್ಟವಾಗುತ್ತಿರುವುದರಿಂದ ಅಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡುವಂತೆ ಹಿರಿಯ ಕಲಾವಿದೆ ಲೀಲಾವತಿ ಮತ್ತು ಪುತ್ರ ವಿನೋದ್ರಾಜ್ ಅವರು ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರಿಗೆ ಮನವಿ ಮಾಡಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಸಚಿವ ರನ್ನು ಭೇಟಿ ಮಾಡಿದ ಅವರು, ಇತ್ತೀಚೆಗೆ ನದಿ ದಾಟುತ್ತಿದ್ದ ವೇಳೆ ಇಬ್ಬರು ಯುವಕರು ಮೃತ ಪಟ್ಟಿದ್ದಾರೆ. ಹಾಗಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡುವಂತೆ ಮನವಿ ಮಾಡಿದರು. 1 ಕೋಟಿ ಯೋಜನೆ ಮಂಜೂರಾಗಿದೆ ಎಂದು ಸಚಿವರು ತಿಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.