ನಾಟಕ ಅಕಾಡೆಮಿಯಲ್ಲಿ ಎಡ-ಬಲ ವಾರ್; ನಟರಾಜನಿಗೆ ಗೇಟ್ ಪಾಸ್?

Published : Feb 02, 2018, 09:00 AM ISTUpdated : Apr 11, 2018, 12:59 PM IST
ನಾಟಕ ಅಕಾಡೆಮಿಯಲ್ಲಿ ಎಡ-ಬಲ ವಾರ್; ನಟರಾಜನಿಗೆ ಗೇಟ್ ಪಾಸ್?

ಸಾರಾಂಶ

ರಾಜಕೀಯದಲ್ಲಿ ಎಡ, ಬಲ ಅಂತ ಗುದ್ದಾಡೋದು ಕಾಮನ್​​. ಆದ್ರೆ ಅದೇ ಎಡ ಬಲ ಸಂಘರ್ಷ ರಂಗಭೂಮಿಯಲ್ಲಿ ಕೇಳಿಬಂದರೆ ಹೇಗಿರುತ್ತೆ.? ಹೌದು ಈಗ ನಾಟಕ ಅಕಾಡೆಮಿ ಪ್ರಶಸ್ತಿ ಫಲಕ ವಿಚಾರಕ್ಕೆ ಎಡ ಬಲ ವಾರ್ ಶುರುವಾಗಿದೆ.

ಬೆಂಗಳೂರು (ಫೆ.02):  ರಾಜಕೀಯದಲ್ಲಿ ಎಡ, ಬಲ ಅಂತ ಗುದ್ದಾಡೋದು ಕಾಮನ್​​. ಆದ್ರೆ ಅದೇ ಎಡ ಬಲ ಸಂಘರ್ಷ ರಂಗಭೂಮಿಯಲ್ಲಿ ಕೇಳಿಬಂದರೆ ಹೇಗಿರುತ್ತೆ.? ಹೌದು ಈಗ ನಾಟಕ ಅಕಾಡೆಮಿ ಪ್ರಶಸ್ತಿ ಫಲಕ ವಿಚಾರಕ್ಕೆ ಎಡ ಬಲ ವಾರ್ ಶುರುವಾಗಿದೆ.

ನಾಟಕ ಅಕಾಡೆಮಿಯಿಂದ ನಟರಾಜನಿಗೆ ಗೇಟ್​ ಪಾಸ್​..?

ನಾಟ್ಯ, ನಾಟಕ ಅಂದಾಕ್ಷಣ ಥಟ್​ ಅಂತ ತಲೆಗೆ ಬರೋದೆ ನಟರಾಜ. ನಟರಾಜನೇ ರಂಗಭೂಮಿಯ ಆರಾಧ್ಯ ದೈವ. ಪ್ರತಿ ವರ್ಷ ನಾಟಕ ಅಕಾಡೆಮಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ನಟರಾಜನಿದ್ದ ಪ್ರಶಸ್ತಿ ಫಲಕ ನೀಡಿ ಸನ್ಮಾನ ಮಾಡುತ್ತಿತ್ತು. ಆದ್ರೆ ಈ ವರ್ಷ ನಾಟಕ ಅಕಾಡೆಮಿಯೇ ನಾಟಕವಾಡುತ್ತಿದೆ. ನಟರಾಜನ ಬದಲಿಗೆ ಬೇರೊಂದು ಅಮೂರ್ತ ಆಕೃತಿಯನ್ನು ಪ್ರಶಸ್ತಿಯಾಗಿ ನೀಡಲು ಮುಂದಾಗಿದೆ. ನಟರಾಜನ ಮೂರ್ತಿ ಬದಲಿಗೆ ಸುದೇಶ್​​ ಮಹಾನ್​ ಎಂಬ ಕಲಾವಿದನ  ಅಮೂರ್ತ ಕಲಾಕೃತಿಯೊಂದನ್ನು ನೀಡಲು ಮುಂದಾಗಿದೆ. ನಟರಾಜನಿಗಿಂತ ಶ್ರೇಷ್ಠವಾದದ್ದನ್ನು ಫಲಕವಾಗಿಸಿದ್ದರೆ ಒಪ್ಪಬಹುದಿತ್ತೇನೋ ಆದ್ರೆ ಪರಂಪರೆಯಿಲ್ಲದ ಯಾವುದನ್ನೋ ಪ್ರಶಸ್ತಿಯನ್ನಾಗಿಸೋದು ಅರ್ಥಹೀನ ಅನ್ನೋದು ಕಲಾವಿದರ ಮಾತು. ಇದು ಎಡ ಪಂಥೀಯ ಸಿದ್ಧಾಂತವನ್ನು ಬಲವಂತವಾಗಿ ರಂಭೂಮಿಯ ಮೇಲೆ ಹೇರುವ ಕಾರ್ಯ ಅನ್ನೋ ಆರೋಪವೂ ಕೇಳಿ ಬಂದಿದೆ.

ಒಟ್ಟಿನಲ್ಲಿ ಪ್ರಶಸ್ತಿ ಸ್ಮರಣಿಕೆ ಬದಲಾವಣೆ ಹಿಂದೆ ರಾಜ್ಯ ಸರ್ಕಾರದ ಎಡಪಂಥಿಯ ಚಿಂತನೆಯೇ ಕಾರಣವಾ ಅನ್ನೋ ಪ್ರಶ್ನೆ ಕೂಡ  ಉದ್ಭವಿಸಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಸಕರಿಗೆ ಡಿ.ಕೆ.ಶಿವಕುಮಾರ್‌ ಔತಣಕೂಟ; 25ಕ್ಕೂ ಹೆಚ್ಚು ಶಾಸಕರು ಭಾಗಿ
ಸುತ್ತೋಲೆ ವಿವಾದಕ್ಕೆ ತೆರೆ.. ಹಾಲಿ ಪಿಯುಸಿ ಉಪನ್ಯಾಸಕರಿಗೆ ಇಲ್ಲ ಹಿಂಬಡ್ತಿ: ಸಚಿವ ಮಧು ಬಂಗಾರಪ್ಪ