ಪ್ರಕಾಶ್ ರೈ ವಿರುದ್ಧ ಹೆಚ್ಚಾದ ಆಕ್ರೋಶ; ರೈ ಪರ ಬೀದಿಗಿಳಿದ ಎಡಪಂಥೀಯರು

Published : Oct 03, 2017, 08:27 PM ISTUpdated : Apr 11, 2018, 01:08 PM IST
ಪ್ರಕಾಶ್ ರೈ ವಿರುದ್ಧ ಹೆಚ್ಚಾದ ಆಕ್ರೋಶ; ರೈ ಪರ ಬೀದಿಗಿಳಿದ ಎಡಪಂಥೀಯರು

ಸಾರಾಂಶ

ನಟ ಪ್ರಕಾಶ್​ ರೈ ಪ್ರಧಾನಿ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ವಿಚಾರವಾಗಿ ಆಡಿದ ಮಾತುಗಳು ಈಗ ವಿವಾದದ ಕಿಡಿ ಹೊತ್ತಿಸಿವೆ. ಇನ್ನೊಂದೆಡೆ ಪ್ರಕಾಶ್​ ರೈ ಪರವಾಗಿ ಬೆಂಗಳೂರಿನಲ್ಲಿ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆಗಳು ನಡೆದಿವೆ.

ಬೆಂಗಳೂರು (ಅ.03): ನಟ ಪ್ರಕಾಶ್​ ರೈ ಪ್ರಧಾನಿ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ವಿಚಾರವಾಗಿ ಆಡಿದ ಮಾತುಗಳು ಈಗ ವಿವಾದದ ಕಿಡಿ ಹೊತ್ತಿಸಿವೆ. ಇನ್ನೊಂದೆಡೆ ಪ್ರಕಾಶ್​ ರೈ ಪರವಾಗಿ ಬೆಂಗಳೂರಿನಲ್ಲಿ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆಗಳು ನಡೆದಿವೆ.

ಪ್ರಧಾನಿ ನರೇಂದ್ರ  ಮೋದಿ ಮತ್ತು ಯೋಗಿ ಆದಿತ್ಯನಾಥ್​ ವಿರುದ್ಧ ಡಿವೈಎಫ್​ಐ ಕಾರ್ಯಕ್ರಮದಲ್ಲಿ ಪಾಳ್ಗೊಂಡು ನಟ ಪ್ರಕಾಶ್​ ರೈ ಆಡಿದ ಮಾತು ಈಗ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ರಾಜಕೀಯ ವಲಯದಲ್ಲಿ ವಿವಾದ ಕಿಡಿ ಭುಗಿಲೇಳುವಂತೆ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಾಶ್​ ರೈ ವಿರುದ್ಧ ಆಕ್ರೋಶ ಮುಂದುವರಿದಿದ್ದರೆ, ರಾಜ್ಯ ಬಿಜೆಪಿ ನಾಯಕರು ಕೂಡಾ ನಟ ರೈ ವಿರುದ್ಧ ಮುಗಿಬಿದ್ದಿದ್ದಾರೆ. ನಿಜ ಜೀವನದಲ್ಲೂ ಖಳನಟರಾಗಬೇಡಿ, ಮೋದಿ ವಿರುದ್ಧ ಬೀದಿಯಲ್ಲಿ ಮಾತನಾಡಿದರೆ ಅದೇ ರೀತಿಯಲ್ಲಿ ಉತ್ತರಿಸಬೇಕಾಗುತ್ತದೆ ಎಂದು ಬಿಜೆಪಿ ಸಂಸದ ಪ್ರತಾಪಸಿಂಹ ಎಚ್ಚರಿಸಿದ್ದಾರೆ.

ಇನ್ನು ಪ್ರಕಾಶ್​ ರೈ ಅವರಿಂದ ಇಂತಹ ಮಾತು ನಿರೀಕ್ಷೆ ಮಾಡಿರಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದರೆ, ನಟ ರೈ ಅವರ ಕ್ಷೇತ್ರವನ್ನಷ್ಟೇ ನೋಡಿಕೊಳ್ಳಲಿ ಎಂದು ಬಿಜೆಪಿ ಶಾಸಕ ಸುರೇಶ್​ ಕುಮಾರ್​ ಪ್ರತಿಕ್ರಿಯಿಸಿದ್ದಾರೆ. ಈ ಮಧ್ಯೆ ಪ್ರಕಾಶ್​ ರೈ ಅವರಿಗೆ ಬೆಂಬಲವಾಗಿ ಎಡಪಂಥೀಯ ಸಂಘಟನೆಗಳು ಬೀದಿಗಳಿದಿವೆ. ಬೆಂಗಳೂರಿನ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಡಿವೈಎಫ್​ಐ ಮತ್ತು ಎಸ್​ಎಫ್​ಐ ಪ್ರತಿಭಟನೆ ನಡೆಸಿದರೆ ಪುರಭವನದ ಎದುರು ಸಮಾನ ಮನಸ್ಕರ ವೇದಿಕೆ ಹೆಸರಿನಲ್ಲಿ ಪ್ರತಿಭಟನೆ ನಡೆದಿದೆ.

ಒಟ್ಟಾರೆ, ನಟ ಪ್ರಕಾಶ್​ ರೈ ಹೇಳಿದ ಮಾತು ಈಗ ವಿವಾದದ ಕಿಡಿ ಹೊತ್ತಿಸಿರುವುದಂತೂ ನಿಜ. ಇದರ ಜೊತೆಯಲ್ಲೇ ಸಾಮಾಜಿಕ ಜಾಲತಾಣದಲ್ಲಂತೂ ಎಡಪಂಥೀಯ ಮತ್ತು ಬಲಪಂಥೀಯರ ನಡುವಿನ ವಾರ್​ಗೆ ದೊಡ್ಡ ವೇದಿಕೆ ಒದಗಿಸಿದಂತಾಗಿದೆ.

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕುಕ್ಕೆ ದೇವಳ ಆಮಂತ್ರಣ ಪತ್ರಿಕೆ ವಿವಾದ; ಪ್ರೊಟೊಕಾಲ್ ಹೆಸರಲ್ಲಿ ಅನ್ಯಧರ್ಮೀಯರ ಆಹ್ವಾನಕ್ಕೆ ತೀವ್ರ ವಿರೋಧ!
ಚಿನ್ನ-ಬೆಳ್ಳಿ ಖರೀದಿ ಇನ್ನೂ ಕನಸಿನ ಮಾತು; ಆದ್ರೂ ಒಂದ್ಸಾರಿ ಗುಂಡಿಗೆ ಗಟ್ಟಿ ಮಾಡ್ಕೊಂಡು ಬೆಲೆ ನೋಡಿ