
ಬೆಂಗಳೂರು(ಆ.04): ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮೇಲಿನ ಐಟಿ ರೇಡ್ ದೇಶಾದ್ಯಂತ ಭಾರೀ ಸುದ್ದಿಯಾಗಿದೆ. ಇದರೊಂದಿಗೆ ಪವರ್ ಮಿನಿಸ್ಟರ್ ಹೈಕಮಾಂಡ್'ಗೆ ಕಪ್ಪ ಕೊಡುತ್ತಿದ್ದರು ಎನ್ನುವ ಸ್ಫೋಟಕ ಸತ್ಯ ಹೊರಬಿದ್ದಿದೆ. ಇದರ ಬೆನ್ನಲ್ಲೇ ಡಿಕೆಶಿಯವರ ರಕ್ಷಣೆಗಾಗಿ ಘಟಾನುಘಟಿ ಲಾಯರ್'ಗಳು ಮುಂದೆ ಬಂದಿದ್ದಾರೆ.
ರಾಜ್ಯದ ಪವರ್ ಮಿನಿಸ್ಟರ್ ಡಿಕೆ ಶಿವಕುಮಾರ್ ಮೇಲಿನ ಐಟಿ ಕಾರ್ಯಚರಣೆಯಲ್ಲಿ ಭಾರೀ ಟ್ವಿಸ್ಟ್ ಸಿಕ್ಕಿದೆ. ಕಾಂಗ್ರೆಸ್ ನಾಯಕರು ಹೈಕಮಾಂಡ್ಗೆ ಕಪ್ಪ ಕೊಡುತ್ತಿದ್ದಾರೆ ಅನ್ನೋ ಸಂಗತಿ ಬಯಲಾಗಿದೆ. ಮೊನ್ನೆ ಇಂಧನ ಸಚಿವ ಡಿಕೆ ಶಿವಕುಮಾರ್ ಈಗಲ್ ಟನ್ ರೆಸಾರ್ಟ್ಗೆ ಐಟಿ ಅಧಿಕಾರಿಗಳು ದಾಳಿ ಮಾಡಿದಾಗ ದಾಖಲೆ ಹರಿದು ಹಾಕಿದ್ರು. ಹರಿದು ಹಾಕಿದ ಆ ದಾಖಲೆಯನ್ನು ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಈ ದಾಖಲೆಯನ್ನು ಪರಿಶೀಲಿಸಿದಾಗ ಅದರಲ್ಲಿ ಡಿಕೆ ಶಿವಕುಮಾರ್ ಕಾಂಗ್ರೆಸ್ ಹೈಕಮಾಂಡ್ಗೆ 3 ಕೋಟಿ ಕಪ್ಪ ಕೊಟ್ಟಿರುವ ಬಗ್ಗೆ ಉಲ್ಲೇಖವಾಗಿದೆ. ಹೀಗಂತ ರಾಷ್ಟ್ರೀಯ ಸುದ್ದಿವಾಹಿನಿ ವರದಿ ಮಾಡಿದೆ.
ಇನ್ನೂ ಲೋಕಸಭೆಯಲ್ಲಿ ನಿನ್ನೆ ವಿತ್ತ ಸಚಿವ ಅರುಣ್ ಜೇಟ್ಲಿ ಡಿ.ಕೆ.ಶಿವಕುಮಾರ್ ಪೇಪರ್ ಹರಿದು ಹಾಕಿದ್ದರು ಎಂದು ಆರೋಪಿಸಿದ್ದರು.
ಚಕ್ರವ್ಯೂಹದಿಂದ ಹೊರಬರಲು ಡಿಕೆಶಿ ರೆಡಿ ಮಾಡಿದ್ದಾರೆ ರಣತಂತ್ರ
ಡಿಕೆಶಿಯವರ ಮೇಲೆ ಐಟಿ ದಾಳಿಗೆ ಕೇಂದ್ರ ಸರ್ಕಾರವೇ ನೇರ ಕಾರಣ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ನಾಯಕರು, ಡಿಕೆಶಿಯವರ ರಕ್ಷಣೆಗೆ ನಿಂತಿದ್ದಾರೆ. ಇದಕ್ಕಾಗಿ ಘಟಾನುಘಟಿ ವಕೀಲರ ತಂಡವನ್ನೇ ರಚಿಸಿ ಐಟಿ ವಿರುದ್ಧ ಕಾನೂನು ಸಮರಕ್ಕೆ ಸಿದ್ಧತೆ ಮಾಡಿಕೊಂಡಿದೆ. ಇನ್ನು, ಈ ಲೀಗಲ್ ಟೀಂನಲ್ಲಿ ಯಾರೆಲ್ಲಾ ಇರ್ತಾರೆ?
ಮಾಜಿ ಕೇಂದ್ರ ಸಚಿವ ಹಾಗೂ ಖ್ಯಾತ ಹಿರಿಯ ವಕೀಲರಾದ ಕಪಿಲ್ ಸಿಬಲ್ ನೇತೃತದ ಲೀಗಲ್ ಟೀಂನಲ್ಲಿ ಮಾಜಿ ಅಡ್ವೊಕೇಟ್ ಜನರಲ್ ಆಗಿರುವ ಉದಯ್ ಹೊಳ್ಳ, ಖ್ಯಾತ ವಕೀಲರಾದ ಅಜ್ಮತ್ ಪಾಷಾ ಸೇರಿದಂತೆ ಐವರು ವಕೀಲರ ತಂಡವನ್ನ ರಚಿಸಲಾಗಿದೆ ಎಂದು ತಿಳಿದುಬಂದಿದೆ.
ಇನ್ನು, ಮತ್ತೊಂದು ಮೂಲಗಳ ಪ್ರಕಾರ, ಐಟಿ ಅಧಿಕಾರಿಗಳ ಕಾರ್ಯಾಚರಣೆ ಮುಕ್ತಾಯವಾಗುತ್ತಿದ್ದಂತೆ ಐಟಿ ಅಧಿಕಾರಿಗಳು ನೀಡುವ ಮಾಹಿತಿ ಆಧರಿಸಿ ಡಿಕೆಶಿ ವಿರುದ್ಧ ಎಫ್ ಐಆರ್ ದಾಖಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.