ಬಿಜೆಪಿಯಲ್ಲಿ ಭಿನ್ನಮತ, ಸ್ವಪಕ್ಷದ ಶಾಸಕರಿಗೆ ಶ್ರೀನಿವಾಸ ಪೂಜಾರಿ ಕ್ಲಾಸ್

Published : Jul 10, 2018, 05:54 PM ISTUpdated : Jul 10, 2018, 05:56 PM IST
ಬಿಜೆಪಿಯಲ್ಲಿ ಭಿನ್ನಮತ, ಸ್ವಪಕ್ಷದ ಶಾಸಕರಿಗೆ ಶ್ರೀನಿವಾಸ ಪೂಜಾರಿ ಕ್ಲಾಸ್

ಸಾರಾಂಶ

ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟವಾಗಿದೆ. ಇದೇನು ಚುನಾವಣೆ ಮುಗಿದ ಮೇಲೆ ಬಿಜೆಪಿಯಲ್ಲಿ ಏನಾಯಿತು? ಅಂದುಕೊಂಡ್ರಾ.. ಈ ಸುದ್ದಿ ಓದಿ ಎಲ್ಲವೂ ಗೊತ್ತಾಗುತ್ತದೆ.

ಬೆಂಗಳೂರು[ಜು.10]  ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ನಡಾವಳಿಗಳನ್ನು ವಿರೋಧಿಸಿ ವಿಧಾನಪರಿಷತ್ ಸದಸ್ಯರು ಸಭಾತ್ಯಾಗ ಮಾಡಿದ್ದಕ್ಕೆ ಸ್ವತಃ ಮೇಲ್ಮನೆ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನು ಇನ್ನೂ ಕೆಲ ವಿಚಾರ ಪ್ರಸ್ತಾಪ ಮಾಡುವುದು ಬಾಕಿ ಇತ್ತು. ಯಾರನ್ನು ಕೇಳಿ ನೀವು ಸಭಾತ್ಯಾಗ ಮಾಡಿದಿರಿ ಎಂದು ಬಿಜೆಪಿ ಶಾಸಕರನ್ನು ಪ್ರಶ್ನೆ ಮಾಡಿದ್ದಾರೆ. ಹೀಗೆ ನಿಮ್ಮ ಇಷ್ಟಕ್ಕೆ ಬಂದಂತೆ ನಡೆದುಕೊಳ್ಳೋದಾದ್ರೆ ನಾನ್ಯಾಕೆ ಬೇಕು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಶಾಣಪ್ಪ ಅವರು ಹೊರಗೆ ಬಂದಿದ್ದರಿಂದ ನಾವೂ ಹೊರಕ್ಕೆ ಬಂದೆವು ಎಂದು ಕೆಲ ಬಿಜೆಪಿ ಶಾಸಕರು ಉತ್ತರವನ್ನು ಕೊಟ್ಟರು.

ಆದರೆ ಇದಕ್ಕೆ ತೃಪ್ತಿಯಾಗದ ಪೂಜಾರಿ, ನಾನು ಇನ್ನೊಂದಿಷ್ಟು ಸ್ಪಷ್ಟೀಕರಣ ಕೊಡುವುದಿತ್ತು. ಹೀಗೆ ನಡೆದುಕೊಂಡಿದ್ದು ಸರಿಯಲ್ಲ. ಇನ್ನು ಮುಂದೆ ಹೀಗಾಗದಂತೆ ಎಚ್ಚರ ವಹಿಸಿ ಎಂದು ಎಚ್ಚರಿಕೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ