ಸ್ಟುಡಿಯೋದಲ್ಲಿ ಬಾಯಿಗೆ ಬಂದಂತೆ ಮಾತನಾಡುವ ಮಾಧ್ಯಮದವರೇನು ಸಾಚಾನಾ? ವಿಧಾನಸಭೆಯಲ್ಲಿ ಶಾಸಕರ ಆಕ್ರೋಶ

Published : Mar 22, 2017, 02:24 PM ISTUpdated : Apr 11, 2018, 12:41 PM IST
ಸ್ಟುಡಿಯೋದಲ್ಲಿ ಬಾಯಿಗೆ ಬಂದಂತೆ ಮಾತನಾಡುವ ಮಾಧ್ಯಮದವರೇನು ಸಾಚಾನಾ? ವಿಧಾನಸಭೆಯಲ್ಲಿ ಶಾಸಕರ ಆಕ್ರೋಶ

ಸಾರಾಂಶ

ಜೆಡಿಎಸ್ ಶಾಸಕ ಸಾರಾ ಮಹೇಶ್ ಮಾತನಾಡಿ, ಮಾಧ್ಯಮದವರ ಮೇಲೂ ಸಾಕಷ್ಟು ಆರೋಪಗಳಿವೆ. ಇವರೆಲ್ಲಾ ಸಾಚಾಗಳಾ? ಮಾಧ್ಯಮದಲ್ಲಿ ಇರೋರೆಲ್ಲಾ ಸತ್ಯಹರಿಶ್ಚಂದ್ರರಾ? ಎಂದು ಪ್ರಶ್ನಿಸಿದರು.

ಬೆಂಗಳೂರು(ಮಾ. 22): "ನಮ್ಮ ತಪ್ಪಿಲ್ಲದಿದ್ದರೂ ಮಾಧ್ಯಮಗಳು ತಪ್ಪು ತೋರಿಸುತ್ತಿವೆ. ಬಾಯಿಗೆ ಬಂದಂತೆ ಸ್ಟುಡಿಯೋದಲ್ಲಿ ಕುಳಿತು ಮಾತನಾಡುತ್ತಾರೆ. ಏನು ಬೇಕಾದ್ರೂ ಹೇಳುತ್ತಾರೆ. ಟಿವಿ ಮಾಧ್ಯಮದವರು ಮಾತನಾಡುವ ಬದಲು, ಗ್ರಾ.ಪಂ. ಪಂಚಾಯ್ತಿಗೆ ಸ್ಪರ್ಧಿಸಲಿ. ಆಗ ಗೊತ್ತಾಗುತ್ತೆ ಜನರ ಸಮಸ್ಯೆ ಏನು ಅಂತ..." - ಇದು ಕಾಂಗ್ರೆಸ್ ಶಾಸಕ ಶಿವರಾಜ್ ತಂಗಡಿಗೆ ಮಾಧ್ಯಮಗಳ ವಿರುದ್ಧ ಹೊರಹಾಕಿದ ಅಸಮಾಧಾನದ ಮಾತುಗಳು.

ಬುಧವಾರ ವಿಧಾನಸಭಾ ಕಲಾಪದಲ್ಲಿ ನಿಯಮ 69ರ ಅಡಿ ನಡೆದ ಚರ್ಚೆಯಲ್ಲಿ ಮಾತನಾಡಿದ, ಶಾಸಕರಾದ ತಂಗಡಗಿ, ಬಿಆರ್ ಪಾಟೀಲ್, ರಾಜು ಕಾಗೆ, ಸುರೇಶ್ ಗೌಡ ಟಿವಿ ಮಾಧ್ಯಮಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಮಾಧ್ಯಮದವರಿಂದ ರಕ್ಷಣೆ ಕೊಡಿಸಿ ಎಂದು ಮನವಿ ಮಾಡಿದ ಪ್ರಸಂಗ ನಡೆಯಿತು. ಯಾರು ಎಲ್ಲಿ ಕುಳಿತು ಏನು ಬೇಕಾದರೂ ಮಾತನಾಡಬಹುದು. ಸ್ವಾತಂತ್ರ್ಯದ ಹೆಸರಲ್ಲಿ ಏನು ಬೇಕಾದರೂ ಮಾಡಬಹುದು. ಸದನದಲ್ಲಿ ತೂಕಡಿಸಿದ್ರು ಅದು ಸುದ್ದಿ. ನಾವೇನು ಮನುಷ್ಯರಲ್ಲವಾ? ಎಂದು ಅಳಂದದ ಕೆಜೆಪಿ ಶಾಸಕ ಬಿಆರ್ ಪಾಟೀಲ್ ಕಿಡಿಕಾರಿದರು.

ನಮ್ಮನ್ನು ಗೂಂಡಾಗಳು, ರೌಡಿಗಳು ಎಂದೆಲ್ಲಾ ಸಂಬೋಧಿಸಿ ಸುದ್ದಿ ಪ್ರಸಾರ ಮಾಡ್ತಾರೆ ಎಂದು ಶಾಸಕ ಸುರೇಶ್ ಗೌಡ ಅಸಮಾಧಾನ ವ್ಯಕ್ತಪಡಿಸಿದರೆ, ಜೆಡಿಎಸ್ ಶಾಸಕ ಸಾರಾ ಮಹೇಶ್ ಮಾತನಾಡಿ, ಮಾಧ್ಯಮದವರ ಮೇಲೂ ಸಾಕಷ್ಟು ಆರೋಪಗಳಿವೆ. ಇವರೆಲ್ಲಾ ಸಾಚಾಗಳಾ? ಮಾಧ್ಯಮದಲ್ಲಿ ಇರೋರೆಲ್ಲಾ ಸತ್ಯಹರಿಶ್ಚಂದ್ರರಾ? ಎಂದು ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವೀಕ್ ಡೇಸಲ್ಲಿ ಫ್ರೊಫೆಸರ್, ವೀಕೆಂಡ್‌ನಲ್ಲಿ ಖತರ್ನಾಕ್ ಕಳ್ಳಿ! ಮದುವೆ ಮನೆಗಳಲ್ಲಿ ಕನ್ನ ಹಾಕುತ್ತಿದ್ದ ಶಿಕ್ಷಕಿ!
2026 Holiday Calendar:ಮುಂದಿನ ವರ್ಷ ಕುಟುಂಬದ ಜೊತೆ ಟ್ರಿಪ್ ಹೋಗೋಕೆ ಇಲ್ಲಿದೆ ಬೆಸ್ಟ್ ಲೀವ್ ಪ್ಲಾನ್!