
ಬೆಂಗಳೂರು(ಡಿ.10): ಬಿಜೆಪಿ ಪ್ರಧಾನ ಕಚೇರಿಯಲ್ಲಿ ಕಾನೂನು ಹಾಗೂ ಸಂಸದೀಯ ಪ್ರಕೋಷ್ಟದ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಿತು.
ಸಭೆಯನ್ನುದ್ದೇಶಿಸಿ ಮಾಜಿ ಕಾನೂನು ಸಚಿವ ಸುರೇಶ್ ಕುಮಾರ್ ಮಾತನಾಡಿ, ಬೆಂಗಳೂರಿನ ಅಂಬೇಡ್ಕರ್ ಬೀದಿಯಲ್ಲಿ ಎರಡು ಕಟ್ಟಡಗಳಿವೆ. ಒಂದು ಕಲ್ಲಿನ ಕಟ್ಟಡ, ಇನ್ನೊಂದು ಕೆಂಪು ಕಟ್ಟಡ. ಕಲ್ಲಿನ ಕಟ್ಟಡದಲ್ಲಿರುವ ಹೃದಯವೂ ಕಲ್ಲಿನದು
ಅಂತ ಜನ ಮಾತಾಡಿಕೊಳ್ಳುತ್ತಾರೆ. ಅದೇ ರೀತಿ ಕೆಂಪು ಕಟ್ಟಡದಲ್ಲಿ ತೀರ್ಪು ಸಿಗುತ್ತಿದೆಯೇ ವಿನಃ ನ್ಯಾಯ ಸಿಗುತ್ತಿಲ್ಲ ಎನ್ನುತ್ತಿದ್ದಾರೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮೂಡನಂಬಿಕೆಗಳ ವಿರೋಧಿ ಕಾಯ್ದೆ ತರಲು ಹೊರಟಿದೆ. ಈ ಕಾಯ್ದೆಯಲ್ಲಿ ಏನಿದೆ ಅಂತ ಅಧ್ಯಯನ ಮಾಡಿ ಜನರಲ್ಲಿ ಜಾಗೃತಿ ಮೂಡಿಸಿ ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.