ದಾರಿ ತಪ್ಪಿ ಮೈಸೂರು ಝೂಗೆ ಬಂದ ಚಿರತೆ

Published : Oct 27, 2017, 02:23 PM ISTUpdated : Apr 11, 2018, 01:11 PM IST
ದಾರಿ ತಪ್ಪಿ ಮೈಸೂರು ಝೂಗೆ ಬಂದ ಚಿರತೆ

ಸಾರಾಂಶ

ಕಾಡಿನಿಂದ ದಾರಿತಪ್ಪಿದ ಚಿರತೆಯೊಂದು ಕಳೆದ ವರ್ಷ ಬೆಂಗಳೂರಿನ ಖಾಸಗಿ ಶಾಲೆಯೊಂದಕ್ಕೆ ಬಂದಿದ್ದು ಎಲ್ಲರಿಗೂ ಗೊತ್ತೇ ಇದೆ.

ಮೈಸೂರು: ಕಾಡಿನಿಂದ ದಾರಿತಪ್ಪಿದ ಚಿರತೆಯೊಂದು ಕಳೆದ ವರ್ಷ ಬೆಂಗಳೂರಿನ ಖಾಸಗಿ ಶಾಲೆಯೊಂದಕ್ಕೆ ಬಂದಿದ್ದು ಎಲ್ಲರಿಗೂ ಗೊತ್ತೇ ಇದೆ.

ಆದರೆ ಇಲ್ಲೊಂದು ಚಿರತೆ ಆಹಾರ ಅರಸಿಕೊಂಡು ಮೃಗಾಲಯ ಪ್ರವೇಶಿಸಿದ ಘಟನೆ ಮೈಸೂರಿನಲ್ಲಿ ಗುರುವಾರ ನಡೆದಿದೆ. ಚಾಮುಂಡಿ ಬೆಟ್ಟದಿಂದ ದಾರಿ ತಪ್ಪಿ ಬಂದಿದೆ ಎಂದು ಹೇಳಲಾದ ಚಿರತೆ ಚಾಮರಾಜೇಂದ್ರ ಮೃಗಾಲಯದಲ್ಲಿ ಬೆಳಗ್ಗೆ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಸಿತ್ತು.

ಗುರುವಾರ ಬೆಳಗ್ಗೆ 9ರ ಸುಮಾರಿಗೆ ಪ್ರಾಣಿಪಾಲಕ ರಾಜಶೇಖರ್ ಝೂನಲ್ಲಿ ಪರಿಶೀಲನೆ ನಡೆಸುತ್ತಿದ್ದಾಗ ಮರದ ಮೇಲೆ ಚಿರತೆ ಇರುವುದು ಕಣ್ಣಿಗೆ ಬಿದ್ದಿದೆ.ಅಷ್ಟರಲ್ಲಾಗಲೆ ಹಲವು ಪ್ರವಾಸಿಗರು ಮೃಗಾಲಯ ಪ್ರವೇಶಿಸಿದ್ದ ಹಿನ್ನೆಲೆಯಲ್ಲಿ ಅವರನ್ನೆಲ್ಲ ತಕ್ಷಣ ಹೊರ ಕಳುಹಿಸಲಾಯಿತು.

ಬಳಿಕ ಕೂಡಲೇ ಕಾರ್ಯಪ್ರವೃತ್ತರಾದ ಮೃಗಾಲಯ ವೈದ್ಯಾಧಿಕಾರಿಗಳು ಅರಿವಳಿಕೆ ನೀಡಿ ಚಿರತೆಯನ್ನು ಸೆರೆಹಿಡಿದರು.

(ಸಾಂದರ್ಭಿಕ ಚಿತ್ರ)

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೋಲ್ಡ್ ಬಾಂಡ್ ಹೂಡಿಕೆದಾರರಿಗೆ ಶೇ.366ರಷ್ಟು ರಿಟರ್ನ್ಸ್, 2 ಲಕ್ಷ ರೂ.ಗೆ 9.32 ಲಕ್ಷ ರೂ ಬಂಪರ್
ರೇ*ಪ್ ಆರೋಪಿ ಜೊತೆ ಸೇರಿಕೊಂಡು ವ್ಯಕ್ತಿ ವಿರುದ್ಧ ಸುಳ್ಳು ರೇ*ಪ್‌ ಕೇಸ್ ಹಾಕಿದ ಮಹಿಳೆ ಬಂಧನ