ಕಾರವಾರ: ಚರ್ಮ ಕಿತ್ತ ಸ್ಥಿತಿಯಲ್ಲಿ ಚಿರತೆ ಮೃತದೇಹ ಪತ್ತೆ

Published : Dec 30, 2018, 09:05 PM ISTUpdated : Dec 30, 2018, 09:20 PM IST
ಕಾರವಾರ: ಚರ್ಮ ಕಿತ್ತ ಸ್ಥಿತಿಯಲ್ಲಿ ಚಿರತೆ ಮೃತದೇಹ ಪತ್ತೆ

ಸಾರಾಂಶ

ದಾಂಡೇಲಿ ಅರಣ್ಯದಲ್ಲಿ ಚಿರತೆ ಬೇಟೆಗಾರರನ್ನು ಬಂಧಿಸಿ ಒಂದು ವಾರದ ಅಂತರದಲ್ಲಿ ಮತ್ತೊಂದು ಚಿರತೆಯಯ ಶವ ಕಾರವಾರದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.

ಕಾರವಾರ[ಡಿ.30]  ತಾಲೂಕಿನ ಹಣಕೋಣದ ಸಾತೇರಿ ದೇವಸ್ಥಾನದ ಸಮೀಪದ ಅರಣ್ಯ ಪ್ರದೇಶದಲ್ಲಿ 3 ವರ್ಷದ ಚಿರತೆಯ ಮೃತದೇಹ ಭಾನುವಾರ ಸಿಕ್ಕಿದೆ. 

ಚಿರತೆ ಭಾನುವಾರ ನಸುಕಿನಲ್ಲಿ ಸತ್ತಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಅಂಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚಿರತೆಯ ದೇಹದ ಒಂದುಕಡೆ ಚರ್ಮ ಕಿತ್ತು ಹೋಗಿದೆ. ಕಳೆದ ಹಲವಾರು ದಿನಗಳಿಂದ ಈ ಭಾಗದಲ್ಲಿ ಚಿರತೆ ಓಡಾಡುತ್ತಿತ್ತು.

ಚಿರತೆಗೆ ಮತ್ತೊಂದು ಮಗು ಬಲಿ.. ಬಳ್ಳಾರಿ ಜನರಿಗೆ ಪ್ರತಿದಿನ ಆತಂಕ

ಮರಣೊತ್ತರ ಪರೀಕ್ಷೆಗಾಗಿ ಡೆಹರಾಡೂನ್‌ಗೆ ದೇಹದ ಮಾದರಿಗಳನ್ನು ರವಾನಿಸಲಾಗಿದೆ. ವಿಷಪ್ರಾಶನದಿಂದ ಅಥವಾ ಉರುಳು ಹಾಕಿ ಸಾಯಿಸಿರುವ ಸಾಧ್ಯತೆ ಇದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸ್ಪಷ್ಟ ಕಾರಣ ತಿಳಿಯಬೇಕಿದೆ. 

ಶುಕ್ರವಾರ ದಾಂಡೇಲಿ ಸಮೀಪದ ಬರ್ಚಿ ಅರಣ್ಯ ಪ್ರದೇಶದಲ್ಲಿ ಚಿರತೆ ಬೇಟಿಯಾಡಿದ್ದ ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಚಿರತೆ ಬಲಿಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!