ಸರ್ಜಿಕಲ್‌ ದಾಳಿ ಹಿಂದಿನ ರಹಸ್ಯ ಬಯಲು

Published : Sep 13, 2018, 08:28 AM ISTUpdated : Sep 19, 2018, 09:24 AM IST
ಸರ್ಜಿಕಲ್‌ ದಾಳಿ ಹಿಂದಿನ ರಹಸ್ಯ ಬಯಲು

ಸಾರಾಂಶ

ಪಾಕಿಸ್ತಾನದ ಉಗ್ರರ ಅಡಗುತಾಣದ ಮೇಲೆ 2016ರಲ್ಲಿ ಭಾರತೀಯ ಸೇನೆಯು ‘ಸರ್ಜಿಕಲ್‌ ದಾಳಿ’ ನಡೆಸಿದ್ದು, ಇದರ ಯಶಸ್ಸಿನ ಹಿಂದಿನ ರಹಸ್ಯವೊಂದನ್ನು ಇದೀಗ ಬಯಲು ಮಾಡಲಾಗಿದೆ.  

ಪುಣೆ: ಭಾರತವು 2016ರ ಸೆಪ್ಟೆಂಬರ್‌ 28 ಹಾಗೂ 29ರಂದು ಪಾಕಿಸ್ತಾನದ ಉಗ್ರರ ಅಡಗುತಾಣದ ಮೇಲೆ ‘ಸರ್ಜಿಕಲ್‌ ದಾಳಿ’ ನಡೆಸಿತ್ತು. ಇದರ 2ನೇ ವರ್ಷಾಚರಣೆಗೆ ಇನ್ನೇನು ಸಿದ್ಧತೆ ನಡೆಯುತ್ತಿದೆ. ಈ ಸರ್ಜಿಕಲ್‌ ದಾಳಿಯ ಯಶಸ್ಸಿನ ಹಿಂದಿನ ಕುತೂಹಲಕರ ರಹಸ್ಯವೊಂದು ಈಗ ಬಯಲಾಗಿದೆ.

ಸೇನೆಗೆ ದಾಳಿಯ ಸಂದರ್ಭದಲ್ಲಿ ನಾಯಿಯ ಬೊಗಳುವಿಕೆ ಭೀತಿ ಇತ್ತು. ನಾಯಿಗಳು ಬೊಗಳಲು ಆರಂಭಿಸಿದರೆ ಉಗ್ರರಿಗೆ ತಮ್ಮ ಪ್ರವೇಶದ ಬಗ್ಗೆ ಗೊತ್ತಾಗಿ ಪ್ರತಿದಾಳಿ ನಡೆಸಬಹುದು ಅಥವಾ ಓಡಿಹೋಗಬಹುದು ಎಂಬ ಆತಂಕವಿತ್ತು. ಇದನ್ನು ತಪ್ಪಿಸಲು ಅವರು ಮಾಡಿದ ‘ಉಪಾಯ’ವೆಂದರೆ ‘ಚಿರತೆ ಮೂತ್ರ’.

‘ಚಿರತೆ ಮೂತ್ರ ಹಾಗೂ ಮಲವೆಂದರೆ ನಾಯಿಗಳು ಹೆದರುತ್ತವೆ. ಈ ಮೂತ್ರ/ಮಲವನ್ನು ಆಘ್ರಾಣಿಸಿದರೆ ನಾಯಿಗಳು ಇಲ್ಲಿ ಚಿರತೆ ಬಂದಿದೆ ಎಂದು ಹೆದರಿ ಬೊಗಳದೇ ತಮ್ಮ ಪಾಡಿಗೆ ತಾವು ಕೂತುಬಿಡುತ್ತವೆ. ಇದೇ ಉಪಾಯವನ್ನು ನಾವು ಮಾಡಿದೆವು. ಚಿರತೆ ಮೂತ್ರವನ್ನು ದಾಳಿ ನಡೆದ ಸ್ಥಳದ ಸುತ್ತಮುತ್ತ ಸಿಂಪಡಿಸಿದೆವು.

ಹೀಗಾಗಿ ನಾಯಿಗಳು ಮುಂದೆ ಬಾರದೇ ತಮ್ಮ ಸ್ಥಳದಲ್ಲೇ ತಾವು ಹೆದರಿ ಕೂತವು. ಆಗ ನಮಗೆ ಉಗ್ರರ ಅಡಗುದಾಣದ ಮೇಲೆ ದಾಳಿ ನಡೆಸಲು ಅನುಕೂಲವಾಯಿತು’ ಎಂದು ದಾಳಿಯಲ್ಲಿ ಪಾಲ್ಗೊಂಡಿದ್ದ ನಗ್ರೋತಾ ಕೋರ್‌ ತುಕಡಿಯ ಕಮಾಂಡರ್‌ ಆಗಿದ್ದ ನಿವೃತ್ತ ಲೆಫ್ಟಿನೆಂಟ್‌ ಜನರಲ್‌ ಆರ್‌.ಆರ್‌. ನಿಂಭೋರ್ಕರ್‌ ಅವರು ಪುಣೆಯಲ್ಲಿ ಬುಧವಾರ ನಡೆದ ಸಮಾರಂಭವೊಂದರಲ್ಲಿ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

KSRTC ಬಸ್ ಡ್ರೈವರ್ ಹಾರ್ನ್ ಮಾಡಿದ್ದೇ ತಪ್ಪಾಯ್ತಂತೆ; ಊರಿನ ಜನರೆಲ್ಲಾ ಸೇರಿಕೊಂಡು ಧರ್ಮದೇಟು ಕೊಟ್ಟರು!
ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು ಮಂಜೂರು!