ಭದ್ರತಾ ಪಡೆಗಳ ಗುಂಡಿಗೆ ಲಷ್ಕರ್ ಚೀಫ್ ಕಮಾಂಡರ್ ಬಲಿ

Published : Aug 01, 2017, 12:02 PM ISTUpdated : Apr 11, 2018, 01:08 PM IST
ಭದ್ರತಾ ಪಡೆಗಳ ಗುಂಡಿಗೆ ಲಷ್ಕರ್ ಚೀಫ್ ಕಮಾಂಡರ್ ಬಲಿ

ಸಾರಾಂಶ

ಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ಭದ್ರತಾಪಡೆಗಳು ಲಷ್ಕರೆ ತೊಯ್ಬಾ ಸಂಘಟನೆಯ ಮುಖ್ಯ ಕಮಾಂಡರ್’ನನ್ನು ಇಂದು ಹೊಡೆದುರುಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ  ಹಾಕ್ರಿಪೋರಾ ಗ್ರಾಮದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಯೋಧರು, ಪಾಕಿಸ್ತಾನದ ಅಬು ದುಜಾನ ಹಾಗೂ ಆತನ ಸಹವರ್ತಿಯನ್ನು ಹೊಡೆದುರುಳಿಸಿದ್ದಾರೆ ಎಂದು ವರದಿಯಾಗಿದೆ.

ಪುಲ್ವಾಮಾ (ಜಮ್ಮು ಮತ್ತು ಕಾಶ್ಮೀರ): ಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ಭದ್ರತಾಪಡೆಗಳು ಲಷ್ಕರೆ ತೊಯ್ಬಾ ಸಂಘಟನೆಯ ಮುಖ್ಯ ಕಮಾಂಡರ್’ನನ್ನು ಇಂದು ಹೊಡೆದುರುಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ  ಹಾಕ್ರಿಪೋರಾ ಗ್ರಾಮದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಯೋಧರು, ಪಾಕಿಸ್ತಾನದ ಅಬು ದುಜಾನ ಹಾಗೂ ಆತನ ಸಹವರ್ತಿಯನ್ನು ಹೊಡೆದುರುಳಿಸಿದ್ದಾರೆ ಎಂದು ವರದಿಯಾಗಿದೆ.

ಈ ವಿಷಯವನ್ನು ಖಾತ್ರಿಪಡಿಸಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭದ್ರತಾ ಪಡೆಗಳ ಪಾಲಿಗೆ ಇದೊಂದು ಮಹತ್ವದ ಸಾಧನೆಯೆಂದು ಹೇಳಿದ್ದಾರೆ.

ಹತರಾದವರ ಮೃತದೇಹಗಳು ಇನ್ನೂ ವಶಪಡಿಕೊಳ್ಳಲಾಗಿಲ್ಲ. ಆ ಬಳಿಕ ವಿವರಗಳನ್ನು ಬಹಿರಂಗ ಪಡಿಸುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮುಖ್ಯಸ್ಥ ಎಸ್.ಪಿ. ವೈದ್ ತಿಳಿಸಿದ್ದಾರೆ.

ಗುಂಡಿನ ಚಕಮಕಿ ಸಂದರ್ಭದಲ್ಲಿ ಕೆಲ ಸ್ಥಳೀಯರು ಭದ್ರತಾ ಪಡೆಗಳ ಮೇಲೆ ಕಲ್ಲೆಸೆತ ನಡೆಸಿದ್ದಾರೆ ಎಂದು ಹೇಳಲಾಗಿದೆ.

ದುಜಾನ ಹತ್ಯೆಯಾಗುವ ಸುದ್ದಿಯನ್ನು ಸುದದ್ದಿವಾಹಿನಿಗಳು ಬಿತ್ತರಿಸಿದ ಬಳಿಕ ಕಲ್ಲೆಸೆತ ಆರಂಭವಾಯಿತೆಂದು ವರದಿಯಾಗಿದೆ.

(ಸಾಂದರ್ಭಿಕ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಾಟಾದ ತಾಜ್‌, ಐಟಿಸಿಗೆ ಅದಾನಿ ಗ್ರೂಪ್ ಟಕ್ಕರ್, ಐಷಾರಾಮಿ ಹೋಟೆಲ್‌ ಉದ್ಯಮಕ್ಕೆ ಎಂಟ್ರಿ, ಏರ್ಪೋರ್ಟ್‌ಗಳೇ ಟಾರ್ಗೆಟ್!
ಬೆಂಗಳೂರು ಕಾಲೇಜಿನಲ್ಲಿ ಹಾಜರಾತಿ ಹಗರಣ; ಅಲಯನ್ಸ್ ವಿವಿ ದೂರು, 6 ಜನರ ವಿರುದ್ಧ ಎಫ್‌ಐಆರ್!