
ನವದೆಹಲಿ (ಜ.16): ರಾಷ್ಟ್ರೀಯ ಸ್ವಯಂಸೇವಕ ಸಂಘವು ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಂಘಟನೆಯಲ್ಲಿ ಸೇರಿಸಿಕೊಳ್ಳಬೇಕು ಎಂದು ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಹಿಳೆಯರಿಗೆ ಮುಂಚೂಣಿ ಜವಾಬ್ದಾರಿಗಳನ್ನು ನೀಡಿರುವ ಪ್ರಜಾಪಿತ ಬ್ರಹ್ಮಕುಮಾರಿಯರ ಸಂಘಟನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅಡ್ವಾಣಿ, ಆರೆಸ್ಸೆಸ್ ಸೇರಿದಂತೆ ಬೇರೆ ಸಂಘಟನೆಗಳೂ ಇದನ್ನು ಅನುಕರಿಸಬೇಕು ಎಂದು ಅಡ್ವಾಣಿ ಹೇಳಿದ್ದಾರೆ.
ಆರೆಸ್ಸೆಸ್ ಸಂಘಟನೆ ಸೇರುವವರಲ್ಲಿ ಹುಡುಗರೇ ಹೆಚ್ಚು. ಮಹಿಳೆಯರಿಗೆ ಅಲ್ಲಿ ಸಣ್ಣಮಟ್ಟದ ಪ್ರಾತಿನಿಧ್ಯ ಇದೆ. ಎಂದು ಬಿಜೆಪಿಯ ಮಾರ್ಗದರ್ಶಕ ಮಂಡಳಿ ಸದಸ್ಯರೂ ಆದ ಅಡ್ವಾಣಿ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.