
ಬಾಗಲಕೋಟೆ[ಜೂ.30] ಬದಾಮಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿ ಸಿದ್ದರಾಮಯ್ಯ ಕುಮಾರಸ್ವಾಮಿಗೆ ಪತ್ರದ ಮೇಲೆ ಪತ್ರ ಬರೆದಿದ್ದಾರೆ. ಬಾದಾಮಿ ಕ್ಷೇತ್ರದ ಜನರ ಬೇಡಿಕೆ ಹಿನ್ನೆಲೆಯಲ್ಲಿ ಈಗಾಗಲೇ ಎರಡು ಪತ್ರ ರವಾನಿಸಿರುವ ಸಿದ್ದರಾಮಯ್ಯ ಗುಳೇದಗುಡ್ಡದಲ್ಲಿ ಜವಳಿ ಪಾರ್ಕ್ ನಿರ್ಮಿಸಬೇಕು ಎಂದು ಬೇಡಿಕೆ ಇಟ್ಟಿದ್ದು ಅಧಿಕಾರಿಗಳ ಸಭೆ ಕರೆಯಲು ಒತ್ತಾಯಿಸಿದ್ದರು.
ಇದಾದ ಮೇಲೆ ಮತ್ತೊಂದು ಪತ್ರ ಬರೆದಿದ್ದು ಗುಳೇದಗುಡ್ಡ ಭಾಗದಲ್ಲಿ ಪರ್ವತಿ ಕೆರೆ,ಗಂಜಿ ಕೆರೆ,ಹಿರೆಕೆರೆಗಳಿಗೆ ನೀರು ತುಂಬಿಸಬೇಕು ಎಂದು ಕೋರಿದ್ದಾರೆ. 12 ಕೋಟಿ ರೂ. ವೆಚ್ಚದ ಅಂದಾಜು ಪ್ರತಿ ಲಗತ್ತಿಸಿ ಸಿಎಂ ಕುಮಾರಸ್ವಾಮಿ ಗೆ ಪತ್ರ ಬರೆದಿದ್ದಾರೆ.
ಶಾಂತಿವನದಿಂದಲೇ ಪತ್ರ: ಧರ್ಮಸ್ಥಳದ ಶಾಂತಿವನದಲ್ಲಿದ್ದಾಗಲೆ ಅಂದರೆ ಜೂನ್ 20 ,ಹಾಗೂ 25 ರಂದು ಕುಮಾರಸ್ವಾಮಿ ಗೆ ಪತ್ರ ಬರೆದಿದ್ದಾರೆ. ಶಾಂತಿವನದಲ್ಲಿದ್ದಾಗ ಸರಕಾರದ ಆಯಸ್ಸಿನ ಬಗ್ಗೆ ನೀಡಿದ್ದ ಹೇಳಿಕೆಯ ತುಣುಕೊಂದು ಮಾಧ್ಯಮಗಳಲ್ಲಿ ಸುದ್ದಿ ಮಾಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.