ಶಾಂತಿವನದಿಂದ ಸಿದ್ದು ಸಿಎಂ ಎಚ್‌ಡಿಕೆಗೆ ಬರೆದ ಎರಡೆರಡು ಪತ್ರದಲ್ಲಿ ಏನಿದೆ?

Published : Jun 30, 2018, 12:43 PM ISTUpdated : Jun 30, 2018, 12:57 PM IST
ಶಾಂತಿವನದಿಂದ ಸಿದ್ದು  ಸಿಎಂ ಎಚ್‌ಡಿಕೆಗೆ ಬರೆದ ಎರಡೆರಡು ಪತ್ರದಲ್ಲಿ ಏನಿದೆ?

ಸಾರಾಂಶ

ಒಂದೆಡೆ ಪ್ರತ್ಯೇಕ ಬಜೆಜ್ ಬೇಕೋ ಬೇಡವೋ ಎಂಬ ಚರ್ಚೆ ಮುಂದುವರಿದಿದ್ದರೆ ಇತ್ತ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಸಮರ ಆರಂಭಿಸಿದ್ದಾರೆ. ಏನಿದು ಸುದ್ದಿ ...ಮುಂದೆ  ಓದಿ.

ಬಾಗಲಕೋಟೆ[ಜೂ.30] ಬದಾಮಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿ ಸಿದ್ದರಾಮಯ್ಯ ಕುಮಾರಸ್ವಾಮಿಗೆ ಪತ್ರದ ಮೇಲೆ ಪತ್ರ ಬರೆದಿದ್ದಾರೆ. ಬಾದಾಮಿ ಕ್ಷೇತ್ರದ ಜನರ ಬೇಡಿಕೆ ಹಿನ್ನೆಲೆಯಲ್ಲಿ ಈಗಾಗಲೇ ಎರಡು ಪತ್ರ ರವಾನಿಸಿರುವ ಸಿದ್ದರಾಮಯ್ಯ ಗುಳೇದಗುಡ್ಡದಲ್ಲಿ ಜವಳಿ ಪಾರ್ಕ್ ನಿರ್ಮಿಸಬೇಕು ಎಂದು ಬೇಡಿಕೆ ಇಟ್ಟಿದ್ದು ಅಧಿಕಾರಿಗಳ ಸಭೆ ಕರೆಯಲು ಒತ್ತಾಯಿಸಿದ್ದರು.

ಇದಾದ ಮೇಲೆ ಮತ್ತೊಂದು ಪತ್ರ ಬರೆದಿದ್ದು ಗುಳೇದಗುಡ್ಡ ಭಾಗದಲ್ಲಿ ಪರ್ವತಿ ಕೆರೆ,ಗಂಜಿ ಕೆರೆ,ಹಿರೆಕೆರೆಗಳಿಗೆ ನೀರು ತುಂಬಿಸಬೇಕು ಎಂದು ಕೋರಿದ್ದಾರೆ. 12 ಕೋಟಿ ರೂ. ವೆಚ್ಚದ ಅಂದಾಜು ಪ್ರತಿ ಲಗತ್ತಿಸಿ ಸಿಎಂ ಕುಮಾರಸ್ವಾಮಿ ಗೆ ಪತ್ರ ಬರೆದಿದ್ದಾರೆ.

ಶಾಂತಿವನದಿಂದಲೇ ಪತ್ರ: ಧರ್ಮಸ್ಥಳದ ಶಾಂತಿವನದಲ್ಲಿದ್ದಾಗಲೆ ಅಂದರೆ ಜೂನ್ 20 ,ಹಾಗೂ 25 ರಂದು  ಕುಮಾರಸ್ವಾಮಿ ಗೆ ಪತ್ರ ಬರೆದಿದ್ದಾರೆ. ಶಾಂತಿವನದಲ್ಲಿದ್ದಾಗ ಸರಕಾರದ ಆಯಸ್ಸಿನ ಬಗ್ಗೆ ನೀಡಿದ್ದ ಹೇಳಿಕೆಯ ತುಣುಕೊಂದು ಮಾಧ್ಯಮಗಳಲ್ಲಿ ಸುದ್ದಿ ಮಾಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಧಾನಿ ಮೋದಿ ಸಮಾಧಿ ಉದ್ಘೋಷದ ವಿರುದ್ಧ ಸಂಸತ್ತಲ್ಲಿ ಗದ್ದಲ: ಕ್ಷಮೆಗೆ ಆಗ್ರಹ
ಯಾವ ರಾಜ್ಯದಲ್ಲಿ ಗರಿಷ್ಠ ಬೆಲೆಗೆ ಮಾರಾಟವಾಗುತ್ತೆ ಪೆಟ್ರೋಲ್? ಕಡಿಮೆಗೆ ಎಲ್ಲಿ ಸಿಗುತ್ತೆ?