ನಿಯಮ ಉಲ್ಲಂಘಿಸಿ ಜಾಹೀರಾತು: ಆಮ್ ಆದ್ಮಿ ಪಕ್ಷಕ್ಕೆ ಭಾರೀ ಮುಖಭಂಗ

Published : Mar 30, 2017, 08:47 AM ISTUpdated : Apr 11, 2018, 12:55 PM IST
ನಿಯಮ ಉಲ್ಲಂಘಿಸಿ ಜಾಹೀರಾತು: ಆಮ್ ಆದ್ಮಿ ಪಕ್ಷಕ್ಕೆ ಭಾರೀ ಮುಖಭಂಗ

ಸಾರಾಂಶ

ಆಮ್ ಆದ್ಮಿ ಸರ್ಕಾರವು ಸುಪ್ರೀಂ ಕೋರ್ಟ್ ನಿಯಮಗಳನ್ನು ಉಲ್ಲಂಘಿಸಿ ಜಾಹೀರಾತುಗಳಿಗೆ ಖರ್ಚು ಮಾಡಿರುವ ರೂ.97 ಕೋಟಿ ಹಣವನ್ನು ಪಕ್ಷದಿಂದ ಭರಿಸುವಂತೆ ಲೆ| ಗ| ಅನಿಲ್ ಬೈಜಲ್ ದೆಹಲಿ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ನವದೆಹಲಿ (ಮಾ.30): ದೆಹಲಿ ಮುನ್ಸಿಪಲ್ ಕಾರ್ಪೊರೇಶನ್'ಗಳಿಗೆ ಚುನಾವಣೆ ಕಾವು ಪಡೆದುಕೊಲ್ಳುತ್ತಿರುವಾಗಲೇ, ಆಮ್ ಆದ್ಮಿ ಪಕ್ಷಕ್ಕೆ ಭಾರೀ ಮುಖಭಂಗವಾಗಿದೆ. ಈ ಹಿಂದೆ ನಿರ್ದಿಷ್ಟ ಜಾಹೀರಾತುಗಳಿಗೆ ಸರ್ಕಾರಿ ಬೊಕ್ಕಸದಿಂದ ಖರ್ಚು ಮಾಡಿರುವ ಹಣವನ್ನು ಆಮ್ ಆದ್ಮಿ ಪಕ್ಷದಿಂದ ಭರಿಸುವಂತೆ ದೆಹಲಿ ಲೆ| ಗ| ಅನಿಲ್ ಬೈಜಲ್ ಸೂಚಿಸಿದ್ದಾರೆ.

ಆಮ್ ಆದ್ಮಿ ಸರ್ಕಾರವು ಸುಪ್ರೀಂ ಕೋರ್ಟ್ ನಿಯಮಗಳನ್ನು ಉಲ್ಲಂಘಿಸಿ ಜಾಹೀರಾತುಗಳಿಗೆ ಖರ್ಚು ಮಾಡಿರುವ ರೂ.97 ಕೋಟಿ ಹಣವನ್ನು ಪಕ್ಷದಿಂದ ಭರಿಸುವಂತೆ ಲೆ| ಗ| ಅನಿಲ್ ಬೈಜಲ್ ದೆಹಲಿ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿಂದೆ ಸರ್ಕಾರಿ ಜಾಹೀರಾತುಗಳಲ್ಲಿನ ಅಂಶಗಳನ್ನು ಪರಿಶೀಲಿಸುವ ಸಮಿತಿಯು ದೆಹಲಿ ಮುಖ್ಯ ಕಾರ್ಯದರ್ಶಿಗೆ ವರದಿಯನ್ನು ಸಲ್ಲಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿತ್ತು. ಕೆಲವು ಜಾಹೀರಾತುಗಳಿಗೆ ವ್ಯಯಿಸಲಾಗಿರುವ ಮೊತ್ತವನ್ನು ಪರಿಶೀಲಿಸಿ, ಅದಕ್ಕೆ ಸಂಬಂಧಿಸಿದ ರಾಜಕೀಯ ಪಕ್ಷದಿಂದಲೇ ಭರಿಸಲು ಹೇಳಿತ್ತು.

ಈ ಕುರಿತು ಸಂಬಂಧಪಟ್ಟ ರಾಜಕೀಯ ಪಕ್ಷಕ್ಕೆ ಮೊದಲು ಜಾಹೀರಾತುಗಳ ಪೂರ್ತಿ ವಿವರಗಳೊಂದಿಗೆ ನೋಟಿಸ್ ಜಾರಿಗೊಳಿಸಿ, 30 ದಿನಗಳೊಳಗೆ ಮೊತ್ತವನ್ನು ಪಾವತಿಸಲು ಸೂಚಿಸಲಾಗುವುದು ಎಂದು ಹೇಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಿಲಯನ್ಸ್‌ ಪವರ್‌, 10 ಮಂದಿ ವಿರುದ್ಧ ಇ.ಡಿ.ಚಾರ್ಜ್‌ಶೀಟ್‌
ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ