ಸಾಮಾಜಿಕ ಜಾಲತಾಣ ಬಳಸುವ ವಿಚಾರದಲ್ಲಿ ಶುರುವಾಗಿದೆ ರಾಜ್ಯಪಾಲ ಮುಖ್ಯಮಂತ್ರಿ ನಡುವೆ ಸಮರ

Published : Jan 05, 2017, 12:38 PM ISTUpdated : Apr 11, 2018, 12:53 PM IST
ಸಾಮಾಜಿಕ ಜಾಲತಾಣ ಬಳಸುವ ವಿಚಾರದಲ್ಲಿ ಶುರುವಾಗಿದೆ ರಾಜ್ಯಪಾಲ ಮುಖ್ಯಮಂತ್ರಿ ನಡುವೆ ಸಮರ

ಸಾರಾಂಶ

ಸಾಮಾಜಿಕ ಜಾಲತಾಣಗಳನ್ನು ಬಳಸುವ ವಿಚಾರವಾಗಿ ರಾಜ್ಯಪಾಲ ಹಾಗೂ ಮುಖ್ಯಮಂತ್ರಿ ನಡುವೆ ಸಮರ ಶುರುವಾಗಿದೆ.

ಪುದುಚೇರಿ (ಜ.05): ಸಾಮಾಜಿಕ ಜಾಲತಾಣಗಳನ್ನು ಬಳಸುವ ವಿಚಾರವಾಗಿ ರಾಜ್ಯಪಾಲ ಹಾಗೂ ಮುಖ್ಯಮಂತ್ರಿ ನಡುವೆ ಸಮರ ಶುರುವಾಗಿದೆ.

ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಮತ್ತು ಮುಖ್ಯಮಂತ್ರಿ ವಿ. ನಾರಾಯಣಸಾಮಿ ರಾಜಕೀಯವಾಗಿ ಮುಖಾಮುಖಿಯಾಗಿದ್ದಾರೆ.

ಆಡಳಿತ ವಿಚಾರ ಕೆಲಸಕ್ಕಾಗಿ ಸಾಮಾಜಿಕ ಮಾಧ್ಯಮವನ್ನು ಬಳಸಬಾರದು ಎಂದು ನಾರಾಯಣ ಸಾಮಿ ಹೊರಡಿಸಿರುವ ಸುತ್ತೋಲೆಯನ್ನು ಕಿರಣ್ ಬೇಡಿ ರದ್ದುಗೊಳಿಸಿದ್ದಾರೆ. ಜ.3 ರಂದು ಪುದುಚೆರಿ ಸರ್ಕಾರ ಆಡಳಿತದ ವಿಚಾರಕ್ಕೆ ಸಾಮಾಜಿಕ ಮಾಧ್ಯಮವನ್ನು ಬಳಸುವುದನ್ನು ನಿಷೇಧಿಸಿತ್ತು.

ಸರ್ಕಾರಿ ಇಲಾಖೆಗಳು ಜಾರಿಗೊಳಿಸುವ ವಿವಿಧ ಯೋಜನೆಗಳ ಬಗೆಗಿನ ವಿವರವನ್ನು ಮತ್ತು ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಲು ಕಿರಣ್ ಬೇಡಿ ವಾಟ್ಸಾಪ್ ಗ್ರೂಪ್ ಮಾಡಿಕೊಂಡಿದ್ದರು. ವಾಟ್ಸಾಪ್, ಟ್ವಿಟರ್ ಹಾಗೂ ಫೇಸ್ ಬುಕ್ ನ್ನು ಮಾಹಿತಿ ವಿನಿಮಯ ಮಾಡಿಕೊಳ್ಳಲು ಬಳಸಬಾರದು ಎಂದು ಎಲ್ಲಾ ಸರ್ಕಾರಿ ಅಧಿಕಾರಿಗಳಿಗೆ, ಇಲಾಖೆ ಮುಖ್ಯಸ್ಥರಿಗೆ, ಸಿಬ್ಬಂದಿಗಳಿಗೆ ಸೂಚನೆ ನೀಡಿತ್ತು.   

ಸಾಮಾಜಿಕ ಜಾಲತಾಣದ ಕೆಲ ಕಂಪನಿಗಳು ವಿದೇಶ ಆಧಾರಿತವಾಗಿದೆ. ಅವು ನಮ್ಮ ಗೌಪ್ಯ ಮಾಹಿತಿಯನ್ನು ಸುಲಭವಾಗಿ ಪಡೆಯುವ ಸಾಧ್ಯತೆಗಳಿರುತ್ತದೆ. ಕೇಂದ್ರೀಯ ಮಾಹಿತಿ ತಂತ್ರಜ್ಞಾನ ಸಚಿವಾಲಯದ ನಿಯಮವನ್ನು ಉಲ್ಲಂಘನೆ ಮಾಡಿದಂತಾಗುತ್ತದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.  

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!