
ಬೆಂಗಳೂರು(ನ.17): ಯೋಧ ನವತಿಂದರ್ಸಿಂಗ್ ಅವರನ್ನು ಹತ್ಯೆಗೈದಿದ್ದ ಪ್ರಕರಣದಲ್ಲಿ ಸತೀಶ್, ಅಂತೋಣಿ, ಪ್ರದೀಪ್ ಎಂಬ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ನಗರದ ಪ್ರಧಾನ ಸೆಷನ್ಸ್ ನ್ಯಾಯಾಲಯ ಗುರುವಾರ ಆದೇಶಿಸಿದೆ.
ಜೀವಾವಧಿ ಶಿಕ್ಷೆ ಜೊತೆ ತಲಾ 10,000 ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ಅಪರಾಧಿಗಳು ವಿಫಲರಾದರೆ ಹೆಚ್ಚುವರಿಯಾಗಿ 6 ತಿಂಗಳ ಶಿಕ್ಷೆಯನ್ನು ಅನುಭವಿಸಬೇಕು ಎಂದು ಆದೇಶಿಸಲಾಗಿದೆ. 2010ರ ನವೆಂಬರ್ 7ರಂದು ನಡೆದಿದ್ದ ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶ ಬಸವರಾಜ ಎಸ್. ಸಪ್ಪಣ್ಣವರ್ ಅವರು ಈ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರ ರೈಲು ನಿಲ್ದಾಣದಲ್ಲಿ ಅಪರಾಧಿಗಳು ಸಾರ್ವಜನಿಕರಿಂದ ಹಣ ಹಾಗೂ ಗಡಿಯಾರ ಕಿತ್ತುಕೊಂಡಿದ್ದರು. ಈ ಸಂಬಂಧ ರೈಲ್ವೆ ಭದ್ರತಾ ಪಡೆಯ(ಆರ್'ಪಿಎಫ್) ಕಾನ್ಸ್ಟೇಬಲ್ ಎಸ್.ಎಸ್. ರಾಮಚಂದ್ರಪ್ಪ ಅವರು ಅಪರಾಧಿಗಳನ್ನು ಹಿಡಿದ್ದರು. ಆಗ ರಾಮಚಂದ್ರಪ್ಪ ಅವರಿಗೆ ಅಪರಾಧಿಗಳು ಚಾಕುವಿ ನಿಂದ ಇರಿದ್ದರು. ಅವರ ಸಹಾಯಕ್ಕೆ ಬಂದ ನವತಿಂದರ್ಸಿಂಗ್ ಅವರಿಗೂ ಚಾಕುವಿನಿಂದ ಮನಸೋ ಇಚ್ಛೆ ಇರಿದು ಹತ್ಯೆಗೈದು ಪರಾರಿಯಾಗಿದ್ದರು. ಪ್ರಕರಣದಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಚನ್ನಪ್ಪ ಜಿ. ಹರಸೂರ ಅವರು ವಾದ ಮಂಡಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.