ಸಚಿವರಿಂದ ವಕೀಲನಿಗೆ ಬೆದರಿಕೆ..! ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಮತ್ತೊಂದು ತಿರುವು

Published : Nov 24, 2017, 01:17 PM ISTUpdated : Apr 11, 2018, 12:41 PM IST
ಸಚಿವರಿಂದ ವಕೀಲನಿಗೆ ಬೆದರಿಕೆ..! ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಮತ್ತೊಂದು ತಿರುವು

ಸಾರಾಂಶ

ಸಚಿವರು ತಮ್ಮ ಮೇಲೆ ಧಮ್ಕಿ ಹಾಕಿರುವ ಆಡಿಯೋ ಪ್ರಸಾರವಾಗುತ್ತಿದ್ದಂತೆ ನನಗೆ ಬೆದರಿಕೆ ಕರೆಗಳು ಬರಲಾರಂಭಿಸಿವೆ. ನಿನ್ನೆ ಕೂಡ ನನ್ನನ್ನು ನಾಲ್ಕು ಕಾರುಗಳಲ್ಲಿ ಕೆಲವು ಅಪರಿಚಿತರು ಧಾರವಾಡದಿಂದ ಹಂಗರಕಿವರೆಗೆ ಹಿಂಬಾಲಿಸಿಕೊಂಡು ಬಂದಿದ್ದಾರೆ. ನಾನು ಹೆದರಿಕೆಯಿಂದಲೇ ಮನೆಗೆ ಹೋದೆ ಎಂದು ಆನಂದ್ ಹೇಳಿಕೊಂಡಿದ್ದಾರೆ.

ಬೆಂಗಳೂರು(ನ.24): ಬಿಜೆಪಿ ಮುಖಂಡ  ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ವಿನಯ್ ಕುಲಕರ್ಣಿಯಿಂದ ನನಗೆ ಜೀವ ಬೆದರಿಕೆ ಇದೆ ಎಂದು  ಯೋಗೀಶ್ ಗೌಡ ಪರ ವಕೀಲ ಆನಂದ್ ಸುವರ್ಣ ನ್ಯೂಸ್ ಬಳಿ ತಮ್ಮ  ಅಳಲನ್ನು ತೊಡಿಕೊಂಡಿದ್ದಾರೆ.

ಸಚಿವರು ತಮ್ಮ ಮೇಲೆ ಧಮ್ಕಿ ಹಾಕಿರುವ ಆಡಿಯೋ ಪ್ರಸಾರವಾಗುತ್ತಿದ್ದಂತೆ ನನಗೆ ಬೆದರಿಕೆ ಕರೆಗಳು ಬರಲಾರಂಭಿಸಿವೆ. ನಿನ್ನೆ ಕೂಡ ನನ್ನನ್ನು ನಾಲ್ಕು ಕಾರುಗಳಲ್ಲಿ ಕೆಲವು ಅಪರಿಚಿತರು ಧಾರವಾಡದಿಂದ ಹಂಗರಕಿವರೆಗೆ ಹಿಂಬಾಲಿಸಿಕೊಂಡು ಬಂದಿದ್ದಾರೆ. ನಾನು ಹೆದರಿಕೆಯಿಂದಲೇ ಮನೆಗೆ ಹೋದೆ ಎಂದು ಆನಂದ್ ಹೇಳಿಕೊಂಡಿದ್ದಾರೆ.

ನಾನು ಹತ್ಯೆಯಾದ ಯೋಗೀಶ್ ಅವರ  ಕುಟುಂಬಕ್ಕೆ ಕಾನೂನು ನೆರವು  ನೀಡುತ್ತಿದ್ದೆ. ಇದಕ್ಕೆ ಸಚಿವರಿಂದ ವಿರೋಧ ವ್ಯಕ್ತವಾಗಿತ್ತು. ನನಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದೆಲ್ಲಾ ನಿಂದಿಸಿದ್ದಾರೆ. ಹಾಗಾಗಿ ಕೂಡಲೇ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಪ್ರಕರಣದಲ್ಲಿ ಮಧ್ಯ ಪ್ರವೇಶಿಸಬೇಕು ಎಂದು ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇನ್ಫೋಸಿಸ್‌ನಿಂದ ಭರ್ಜರಿ ಗುಡ್ ನ್ಯೂಸ್, ಹೊಸಬರ ಸ್ಯಾಲರಿ 21 ಲಕ್ಷ ರೂಪಾಯಿಗೆ ಏರಿಕೆ
ಚಳಿಗೆ ರೋಗನಿರೋಧಕ ಶಕ್ತಿ ಹೆಚ್ಚಿಸುವ ಅರಶಿನ-ಬೆಳ್ಳುಳ್ಳಿ ಉಪ್ಪಿನಕಾಯಿ ಹೀಗೆ ಮಾಡಿ