ಜಾರಕಿಹೊಳಿಯಿಂದ ಜೀವಕ್ಕೆ ಅಪಾಯ; ರಕ್ಷಣೆ ಒದಗಿಸುವಂತೆ ಸುವರ್ಣ ಸೌಧದ ಹೊರಗೆ ಪ್ರತಿಭಟನೆ

Published : Nov 25, 2016, 04:28 AM ISTUpdated : Apr 11, 2018, 12:47 PM IST
ಜಾರಕಿಹೊಳಿಯಿಂದ ಜೀವಕ್ಕೆ ಅಪಾಯ; ರಕ್ಷಣೆ ಒದಗಿಸುವಂತೆ ಸುವರ್ಣ ಸೌಧದ ಹೊರಗೆ ಪ್ರತಿಭಟನೆ

ಸಾರಾಂಶ

ವಿಧಾನಸಭಾ ಚುಣಾವಣಾ ಸಂದರ್ಭದಲ್ಲಿ ಅಕ್ರಮ ಮದ್ಯ ಸಂಗ್ರಹದ ಬಗ್ಗೆ  ಮಾಹಿತಿ ನೀಡಿದಕ್ಕೆ  ಶಾಸಕ ಬಾಲಚಂದ್ರ ಜಾರಕಿಹೊಳಿ  ಹಾಗೂ ಅವರ ಸಂಬಂಧಿಕರು ನನ್ನ ಸಹೋದರನನ್ನು ಕೊಲೆ ಮಾಡಿದ್ದಾರೆ. ನನ್ನ ಮೇಲೆ ಮಾರಣಾಂತಿಕ  ಹಲ್ಲೆ ಮಾಡಿದ್ದಾರೆ. ಮೂರು ವರ್ಷದಿಂದ  ನನ್ನನ್ನು  ಗ್ರಾಮದಿಂದ ಬಹಿಷ್ಕಾರ ಹಾಕಿದ್ದಾರೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ರಕ್ಷಣೆ ಕೊಡಿ: ಕುಟುಂ

ಬೆಳಗಾವಿ (ನ.25):  ಶಾಸಕ ಬಾಲಚಂದ್ರ ಜಾರಕಿಹೊಳಿಯಿಂದ  ಪ್ರಾಣಾಪಾಯವಿರುವ ಹಿನ್ನೆಲೆಯಲ್ಲಿ , ಸರ್ಕಾರ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಿ ಕುಟುಂಬವೊಂದು  ಅಧಿವೇಶನ ನಡೆಯುತ್ತಿರುವ ಸುವರ್ಣ ಸೌಧದ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.

ವಿಧಾನಸಭಾ ಚುಣಾವಣಾ ಸಂದರ್ಭದಲ್ಲಿ ಅಕ್ರಮ ಮದ್ಯ ಸಂಗ್ರಹದ ಬಗ್ಗೆ  ಮಾಹಿತಿ ನೀಡಿದಕ್ಕೆ  ಶಾಸಕ ಬಾಲಚಂದ್ರ ಜಾರಕಿಹೊಳಿ  ಹಾಗೂ ಅವರ ಸಂಬಂಧಿಕರು ನನ್ನ ಸಹೋದರನನ್ನು ಕೊಲೆ ಮಾಡಿದ್ದಾರೆ. ನನ್ನ ಮೇಲೆ ಮಾರಣಾಂತಿಕ  ಹಲ್ಲೆ ಮಾಡಿದ್ದಾರೆ. ಮೂರು ವರ್ಷದಿಂದ  ನನ್ನನ್ನು  ಗ್ರಾಮದಿಂದ ಬಹಿಷ್ಕಾರ ಹಾಕಿದ್ದಾರೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ರಕ್ಷಣೆ ಕೊಡಿ, ಪ್ರಕರಣದ ಬಗ್ಗೆ  ಸಿಐಡಿ ತನಿಖೆ ನಡೆಸಿ, ಇಲ್ಲ ನಮ್ಮ ಕುಟುಂಬಕ್ಕೆ ದಯಾಮರಣ ನೀಡಿ ಎಂದು  ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಕೆಮ್ಮನಕೋಲ ಗ್ರಾಮದ ಮಲ್ಲಿಕಾರ್ಜುನ  ಗಾಣಿಗಿ ಕುಟುಂಬ ಬೆಳಗಾವಿಯ ಸುವರ್ಣ  ಸೌಧ ಮುಂಭಾದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಬಾಲಚಂದ್ರ ಜಾರಕಿಹೊಳಿ ಸಂಬಂಧಿಕರು ನಡೆಸಿದ ದೌರ್ಜನ್ಯದ ಫೋಟೋಗಳನ್ನು ಪ್ರದರ್ಶನ ಮಾಡಿ ಆಳಲು ತೋಡಿಕೊಂಡಿದ್ದಾರೆ. ಇನ್ನೂ ಕೊಲಗೋಡು ಠಾಣೆ ಪೊಲೀಸರು ಶಾಸಕ ಬಾಲಚಂದ್ರ ಜಾರಕಿಹೊಳಿಗೆ  ಹೆದರಿ ಮೌನವಾಗಿದ್ದು  ಕೊಲೆ ಆರೋಪಿಗಳನ್ನು ಬಂಧಿಸುತ್ತಿಲ್ಲ. ಇದರ ಬದಾಲಗಿ ಮದ್ಯ ಸಂಗ್ರಹದ ಬಗ್ಗೆ  ಮಾಹಿತಿ ನೀಡಿದಕ್ಕೆ ನನಗೆ ೪ ಲಕ್ಷ ದಂಡ ಹಾಕಿ ವಸೂಲಿ ಮಾಡಿದ್ದಾರೆ ಎಂದು ಮಲ್ಲಿಕಾರ್ಜುನ ಗಾಣಗಿ ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಖಾತೆಗೆ ಯಾವಾಗ ಬರುತ್ತೆ ಹಣ? ಇಲ್ಲಿದೆ ವಿವರ
ಪ್ರೀತಿ ವಿರೋಧಿಸಿದ ತಂದೆಯನ್ನು ಗೆಳೆಯನ ಜೊತೆ ಸೇರಿ ಮಸಣಕ್ಕೆ ಅಟ್ಟಿದ ಪಾಪಿ ಮಗಳು