
ಚಿಕ್ಕಮಗಳೂರು (ಜ.30): ಶಾಸಕ ಹಾಗೂ ಮಾಜಿ ಸಚಿವ ಸಿ.ಟಿ ರವಿ ಗೆ ಕೊಲೆ ಬೆದರಿಕೆ ಬಂದಿದೆ.
ರೌಡಿ ಪರ್ವೇಜ್ ಎಂಬ ಹೆಸರಲ್ಲಿ ಸಿ.ಟಿ.ರವಿಗೆ ಬೆದರಿಕೆ ಪತ್ರ ಬಂದಿದೆ. ರವಿಯನ್ನು ಹತ್ಯೆ ಮಾಡುವ ಬಗ್ಗೆ ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ.
ಗೌರಿ ಲಂಕೇಶ್, ಕಲಬುರ್ಗಿ ಹತ್ಯೆ ಮಾಡಿರುವುದು ಆರ್'ಎಸ್'ಎಸ್ ಅನ್ನೋದು ಗೊತ್ತಿದೆ. ದೀಪಕ್ ರಾವ್ ಹತ್ಯೆ ಹಿಂದೆ ನಮ್ಮ ಕೈವಾಡ ಇದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಬೆದರಿಕೆ ಪತ್ರದಲ್ಲಿ ರಾಜ್ಯ ಬಿಜೆಪಿ ನಾಯಕರ ಬಗ್ಗೆ ಅವಹೇಳನ ಪದ ಬಳಕೆ ಮಾಡಲಾಗಿದೆ.
ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಎಸ್'ಪಿ ಅಣ್ಣಾಮಲೈಗೆ ದೂರು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.