ಇಂದಿನಿಂದ ಆಗುಂಬೆ ಘಾಟಿಯಲ್ಲಿ ಲಘು ವಾಹನ ಸಂಚಾರ ಅನುಮತಿ

Published : May 16, 2019, 08:47 AM IST
ಇಂದಿನಿಂದ ಆಗುಂಬೆ ಘಾಟಿಯಲ್ಲಿ  ಲಘು ವಾಹನ ಸಂಚಾರ ಅನುಮತಿ

ಸಾರಾಂಶ

ಆಗುಂಬೆ ಘಾಟಿಯಲ್ಲಿ ರಸ್ತೆ ದುರಸ್ತಿ ಕಾರ್ಯ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಗುರುವಾರದಿಂದ ಲಘು ವಾಹನಗಳಾದ ಮಿನಿ ಬಸ್‌ಗಳು, ಜೀಪು, ವ್ಯಾನು, ಕಾರುಗಳು ಹಾಗೂ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಆದೇಶಿಸಿದ್ದಾರೆ.

ಶಿವಮೊಗ್ಗ (ಮೇ. 16): ಆಗುಂಬೆ ಘಾಟಿಯಲ್ಲಿ ರಸ್ತೆ ದುರಸ್ತಿ ಕಾರ್ಯ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಗುರುವಾರದಿಂದ ಲಘು ವಾಹನಗಳಾದ ಮಿನಿ ಬಸ್‌ಗಳು, ಜೀಪು, ವ್ಯಾನು, ಕಾರುಗಳು ಹಾಗೂ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಆದೇಶಿಸಿದ್ದಾರೆ.

ಕಾಂಕ್ರೀಟ್‌ ಕಾಮಗಾರಿ ಕ್ಯೂರಿಂಗ್‌ ಆಗಲು 18 ದಿನಗಳ ಅವಶ್ಯಕತೆ ಇರುವುದರಿಂದ ಇನ್ನುಳಿದ ಎಲ್‌.ಸಿ.ವಿ ವಾಹನಗಳಿಗೆ ಜೂನ್‌ 1ರಿಂದ ಅನುಮತಿ ನೀಡಲಾಗುವುದು. ಅದುವರೆಗೆ ವಾಹನಗಳು ತೀರ್ಥಹಳ್ಳಿ-ಮಾಸಿಕಟ್ಟೆ-ಹೊಸಂಗಡಿ-ಸಿದ್ದಾಪುರ-ಕುಂದಾಪುರ-ಉಡುಪಿ ಹಾಗೂ ತೀರ್ಥಹಳ್ಳಿ-ಕೊಪ್ಪ-ಶೃಂಗೇರಿ-ಮಾಳಾಘಾಟ್‌-ಕಾರ್ಕಳ-ಉಡುಪಿ ಮೂಲಕ ಸಂಚರಿಸಲು ಅವಕಾಶ ಮಾಡಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಿಲಯನ್ಸ್‌ ಪವರ್‌, 10 ಮಂದಿ ವಿರುದ್ಧ ಇ.ಡಿ.ಚಾರ್ಜ್‌ಶೀಟ್‌
ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ