
ನವದೆಹಲಿ: ಲಿಂಗಾಯತ ಸಮುದಾಯಕ್ಕೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ಕೋರುವ ಕರ್ನಾಟಕ ಸರ್ಕಾರದ ಪ್ರಸ್ತಾಪ ಗೃಹ ಸಚಿವಾಲಯವನ್ನು ತಲುಪಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಲೋಕಸಭೆಗೆ ಮಾಹಿತಿ ನೀಡಿದೆ.
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಈ ಬಗ್ಗೆ ಲಿಖಿತ ಉತ್ತರ ನೀಡಿದ್ದಾರೆ. ಆದರೆ ಲಿಂಗಾಯತ ಸಮುದಾಯಕ್ಕೆ ಸ್ವತಂತ್ರ ಧರ್ಮದ ಸ್ಥಾನಮಾನದ ಮಾನ್ಯತೆ ನೀಡುವಂತೆ ಕರ್ನಾಟಕ ದಿಂದ ಯಾವುದೇ ಮನವಿ ಸಚಿವಾಲಯಕ್ಕೆ ಬಂದಿಲ್ಲ ಎಂದು ಸಚಿವ ನಖ್ವಿ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆ ಮಾ.22ರಂದು ಲಿಂಗಾಯತ ಮತ್ತು ವೀರಶೈವ ಲಿಂಗಾಯತರನ್ನು ಧಾರ್ಮಿಕ ಅಲ್ಪಸಂಖ್ಯಾತರೆಂದು ಗುರುತಿಸಿ ಅಧಿಸೂಚನೆ ಹೊರಡಿಸಿ, ಬಳಿಕ ಈ ಕುರಿತ ಸುತ್ತೋಲೆಯನ್ನು ಕೇಂದ್ರಕ್ಕೆ ರವಾನಿಸಿತ್ತು. ಇದೇ ವೇಳೆ ಲಿಂಗಾಯತ ಹಿಂದೂಗಳ ಒಂದು ಪಂಥ, ಅದು ಸ್ವತಂತ್ರ ಧರ್ಮವಲ್ಲ. ಹೀಗಾಗಿ 2011ರ ಜನಗಣತಿಯಲ್ಲಿ ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಕಾಲಂ ನಮೂದಿಸಲು ನಿರ್ದೇಶಿಸಿರಲಿಲ್ಲ.
ಹಿಂದೂ ಹೊರತುಪಡಿಸಿ ಇತರ ಧರ್ಮಗಳ ಕಾಲಂನಲ್ಲಿ ವೀರಶೈವ ಲಿಂಗಾಯತರನ್ನು ಗುರುತಿಸಿದ್ದರೆ, ವೀರಶೈವ ಲಿಂಗಾಯತ ಪಂಥ ಪಾಲಿಸುವ ಎಲ್ಲ ಪರಿಶಿಷ್ಟ ಜಾತಿಗಳು ತಮ್ಮ ಸಾಂವಿಧಾನಿಕ ಮಾನ್ಯತೆ ಕಳೆದುಕೊಳ್ಳುತ್ತವೆ ಎಂಬ ರಿಜಿಸ್ಟ್ರಾರ್ ಜನರಲ್ರ 2013ರ ಉಲ್ಲೇಖವನ್ನು ಗೃಹ ಸಚಿವಾಲಯಕ್ಕೆ ತಲುಪಿಸಲಾಗಿದೆ ಎಂದು ನಖ್ವಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.