
ಕಲಬುರಗಿ(ಸೆ.24): ವೀರಶೈವ ಲಿಂಗಾಯತ ಮತ್ತು ಲಿಂಗಾಯತ ಧರ್ಮದ ಬಗೆಗಿನ ಚರ್ಚೆ ತಾರಕಕ್ಕೇರುತ್ತಿದೆ. ವೀರಶೈವರ ವಿರೋಧದ ನಡುವೆ ಇಂದು ಲಿಂಗಾಯತ ಸಮಾವೇಶ ನಡೆಸಲು ಭಾರಿ ಸಿದ್ಧತೆ ನಡೆದಿದೆ.
ನಗರದ ಎನ್.ವಿ. ಮೈದಾನದಲ್ಲಿ ಲಿಂಗಾಯತ ಸಮಾವೇಶ ನಡೆಯಲಿದೆ. ಸುಮಾರು 5 ಲಕ್ಷ ಜನರನ್ನು ಸೇರಿಸುವ ಗುರಿ ಹೊಂದಲಾಗಿದೆ ಎಂದು ಲಿಂಗಾಯತ ಸಮನ್ವಯ ಸಮಿತಿ ತಿಳಿಸಿದೆ. ಈಗಾಗಲೇ ಬೀದರ್, ಕಲಬುರಗಿ, ಯಾದಗಿರಿ ಹಲವು ತಾಲೂಕು ಗ್ರಾಮಗಳಿಗೆ ಹೋಗಿ ಸಮಾವೇಶದ ಬಗ್ಗೆ ಜನರಿಗೆ ತಿಳಿಸಲಾಗಿದೆ.
ಇಂದಿನ ಸಮಾವೇಶಕ್ಕೆ ಜನಸಾಗರ ಸೇರುವ ನಿರೀಕ್ಷೆ ಇದೆ. ನಗರದಲ್ಲಿ ಎರಡು ದಿನಗಳಿಂದ ಬೈಕ್, ಅಟೋ ಹಾಗೂ ಇಂದು ಕಾರ್ ರ್ಯಾಲಿ ನಡೆಸುವ ಮೂಲಕ ಲಿಂಗಾಯತರು ಸಮಾವೇಶದ ಪೂರ್ವ ತಯಾರಿ ಜೋರಾಗಿ ನಡೆಸುತ್ತಿದ್ದಾರೆ. ಇಂದಿನ ಸಮಾವೇಶ ಭಾರಿ ಕುತೂಹಲ ಮೂಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.