
ಬೆಳಗಾವಿ(ಆ.22): ರಾಜ್ಯದಲ್ಲಿ ಧರ್ಮಯುದ್ಧ ತಾರಕಕ್ಕೇರಿದೆ.. ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಬೇಡಿಕೆ ಹೆಚ್ಚಿದ ಬೆನ್ನಲ್ಲೇ ಇಂದು ಕುಂದಾನಗರಿ ಬೆಳಗಾವಿಯಲ್ಲಿ ಲಿಂಗಾಯತ ಬೃಹತ್ ಸಮಾವೇಶ ನಡೆಯುತ್ತಿದೆ. ಲಿಂಗರಾಜ್ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ಧವಾಗಿದ್ದು, ವಿವಿಧ ಸ್ವಾಮೀಜಿಗಳು ಹಾಗೂ ಲಿಂಗಾಯತ ಸಮುದಾಯದ ಮುಖಂಡರು ಭಾಗವಹಿಸುತ್ತಿದ್ದಾರೆ.
ಕೇವಲ ಕರ್ನಾಟಕ ಮಾತ್ರವಲ್ಲ ಮಹಾರಾಷ್ಟ್ರ, ಕೇರಳ, ಆಂಧ್ರ ಸೇರಿದಂತೆ ವಿವಿಧ ಭಾಗಗಳಿಂದ ಸುಮಾರು ಮೂರು ಲಕ್ಷ ಕ್ಕಿಂತ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಲಿಂಗಾಯತ ಸ್ವತಂತ್ರ ಧರ್ಮದ ಮುಂದಿನ ಹೋರಾಟದ ಕುರಿತು ರೂಪು ರೇಷಗಳನ್ನು ಸಿದ್ಧಪಡಿಸಲಿದ್ದಾರೆ.
ಇನ್ನೂ ಸಮಾವೇಶಕ್ಕೆ ಆಗಮಿಸುವ ಕಾರ್ಯಕರ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು.. ಸುಮಾರು ೩ ಕಡೆ ಅಡುಗೆ ವ್ಯವಸ್ಥೆ ಮಾಡಲಾಗಿದೆ. ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲಾಗಿದೆ.ಒಟ್ಟಾರೆ, ವೀರಶೈವ ಮತ್ತು ಲಿಂಗಾಯತರ ನಡುವಿನ ಧರ್ಮಯುದ್ಧ ಇವತ್ತು ಇನ್ನೊಂದು ಹಂತಕ್ಕೆ ತಲುಪುತ್ತಿದೆ. ಲಿಂಗಾಯತ ಪ್ರತ್ಯೇಕತೆಗೆ ಮಾನ್ಯತೆ ಸಿಗುತ್ತಾ ಕಾದು ನೋಡೋಣ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.