ರಂಭಾಪುರಿ ಮಠ ಶ್ರೀಗಳ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Published : Jul 30, 2017, 08:04 PM ISTUpdated : Apr 11, 2018, 01:00 PM IST
ರಂಭಾಪುರಿ ಮಠ ಶ್ರೀಗಳ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

ಸಾರಾಂಶ

ರಾಷ್ಟ್ರೀಯ ಬಸವ ದಳ ಸೇರಿದಂತೆ ವಿವಿಧ ಲಿಂಗಾಯತ ಸಂಘಟನೆಗಳು ಮತ್ತು ಜನರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ, ರಂಭಾಪುರಿ ಶ್ರೀಗಳ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದರು. ಅಷ್ಟೇ ಅಲ್ಲ, ರಂಭಾಪುರಿ ಶ್ರೀಗಳು ಇದೇ ರೀತಿ ಉದ್ದಟತನ ಮೆರೆದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದೂ ಅವರು ಎಚ್ಚರಿಕೆ ನೀಡಿದರು.

ಬೆಳಗಾವಿ(ಜುಲೈ 30): ರಾಜ್ಯದಲ್ಲಿ ವೀರಶೈವ ವರ್ಸಸ್ ಲಿಂಗಾಯತ ಯುದ್ಧ ಮುಂದುವರಿದಿದೆ. ಮಾತೆ ಮಹಾದೇವಿಯವರನ್ನು ಅವಹೇಳನ ಮಾಡಿ ಮಾತನಾಡಿದರೆನ್ನಲಾದ ರಂಭಾಪುರಿ ಮಠದ ಸ್ವಾಮಿಗಳ ವಿರುದ್ಧ ಲಿಂಗಾಯತ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ. ಇಂದು ಭಾನುವಾರ ಮಾತೆ ಮಹಾದೇವಿಯವರ ನೂರಾರು ಭಕ್ತರು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಮಾತೆ ಮಹಾದೇವಿಯರ ಚರಿತ್ರೆ ಸರಿ ಇಲ್ಲವೆಂದು ರಂಭಾಪುರಿ ಶ್ರೀ ಹೇಳುತ್ತಾರೆ. ಆದರೆ, ಅವರ ಚರಿತ್ರೆ ತೆಗೆದಷ್ಟೂ ಕೊಳಕು ಬರುತ್ತೆ ಎಂದು ಪ್ರತಿಭಟನಾಕಾರರು ಮಾಧ್ಯಮಗಳಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರೀಯ ಬಸವ ದಳ ಸೇರಿದಂತೆ ವಿವಿಧ ಲಿಂಗಾಯತ ಸಂಘಟನೆಗಳು ಮತ್ತು ಜನರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ, ರಂಭಾಪುರಿ ಶ್ರೀಗಳ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದರು. ಅಷ್ಟೇ ಅಲ್ಲ, ರಂಭಾಪುರಿ ಶ್ರೀಗಳು ಇದೇ ರೀತಿ ಉದ್ದಟತನ ಮೆರೆದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದೂ ಅವರು ಎಚ್ಚರಿಕೆ ನೀಡಿದರು.

ವರದಿ: ಮಂಜುನಾಥ ಎಚ್.ಪಾಟೀಲ್, ಸುವರ್ಣನ್ಯೂಸ್, ಬೆಳಗಾವಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

₹1.50 ಲಕ್ಷದತ್ತ ಚಿನ್ನದರ ನಾಗಾಲೋಟ!
ಲವರ್ ಜೊತೆ ಸೇರಿ ಪತಿ ಹತ್ಯೆಗೈದು ದೇಹದ ಒಂದೊಂದು ಪೀಸ್ ಜಿಲ್ಲೆಯ ಪ್ರತಿ ಗಾಮದಲ್ಲಿ ಎಸೆದ ಪತ್ನಿ