ಕುಡಿದ ಮತ್ತಿನಲ್ಲಿ ಟ್ಯಾಂಕ್ ಹೇಗಿರುತ್ತೆ ನೋಡಲು ಹೋದವನು 2 ದಿನ ಅದರೊಳಗೇ ಕಳೆದ

By Internet DeskFirst Published Sep 25, 2016, 5:11 AM IST
Highlights

ಮೈಸೂರು(ಸೆ.25): ನೀರಿನ ಟ್ಯಾಂಕಿಗೆ ಬಿದ್ದು ಮೇಲೆ ಬರಲಾಗದೆ ಕಳೆದೆರಡು ದಿನಗಳಿಂದ ಟ್ಯಾಂಕಿನೊಳಗೆ ಜೀವನಸಾಗಿಸುತ್ತಿದ್ದವನನ್ನು ಕೊನೆಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ.

ಮೈಸೂರಿನ ಮೂಗನಹುಂಡಿ ಗ್ರಾಮದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮುಖೇಶ್, ಕುಡಿದ ಅಮಲಿನಲ್ಲಿ ಟ್ಯಾಂಕ್‌ ಯಾವ ರೀತಿ ಇರುತ್ತದೆ ಎಂದು ನೋಡ ಹೋಗಿದ್ದಾನೆ. ಆದರೆ ಈ ವೇಳೆ ನಿಯಂತ್ರಣ ತಪ್ಪಿ 25 ಅಡಿ ಆಳದ ನೀರಿನ ಟ್ಯಾಂಕಿಗೆ ಬಿದ್ದಿದ್ದಾನೆ. ಟ್ಯಾಂಕಿನಲ್ಲಿ ನೀರಿಲ್ಲದ ಕಾರಣ ಪ್ರಾಣಪಾಯದಿಂದ ಪಾರಾಗಿದ್ದಾನೆ. ಆದರೆ ಮೇಲ್ಬರಲಾಗದೆ ಯಾರಾದರೂ ಕಾಪಾಡಿ ಎಂದು ಕೂಗಾಡುತ್ತಿದ್ದ. ಧ್ವನಿ ಕೇಳಿ ಸ್ಥಳಕ್ಕೆ ಬಂದ ಮೂಗನಹುಂಡಿ ಗ್ರಾಮದ ದನಕಾಯುವ ಹುಡುಗರು ಇವನನ್ನ ರಕ್ಷಿಸಲು ಮುಂದಾಗಿದ್ದಾರೆ. ಆದರೆ ಟ್ಯಾಂಕಿಗೆ ಹಾಕಿದ್ದ ಕಬ್ಬಿಣದ ಏಣಿಯನ್ನು ದುಷ್ಕರ್ಮಿಗಳು ಕದ್ದಿದ್ದರಿಂದ ಮುಖೇಶ್‌'ನನ್ನು ರಕ್ಷಿಸಲು ಅವರಿಗೆ ಸಾಧ್ಯವಾಗಿಲ್ಲ.

Latest Videos

ನಿನ್ನೆ ಇಡೀ ದಿನ ಮೂಗನಹುಂಡಿ ಗ್ರಾಮದ ಯುವಕರು ಹಗ್ಗದ ಮೂಲಕ ಊಟ, ನೀರು ಕೊಟ್ಟು ಮುಖೇಶ್‌'ನನ್ನು ಸಂತೈಸಿ ಜೀವ ಉಳಿಸಿದ್ದಾರೆ. ಇಂದು ಬೆಳಗ್ಗೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮುಖೇಶ್‌'ನನ್ನು ಸುರಕ್ಷಿತವಾಗಿ ಮೇಲೆತ್ತಿದ್ದಾರೆ. ಸದ್ಯ ಮುಖೇಶ್‌'‌ನನ್ನು ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

click me!