
ಮಾಲೂರು[ಜೂ.26]: ವರನ ಎತ್ತರ 2.5 ಅಡಿಯಾದರೆ, ವಧುವಿನ ಎತ್ತರ 2 ಅಡಿ... ಇಂತಿಪ್ಪಾ ಕುಬ್ಜ ಜೋಡಿ ವಿವಾಹಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯ ಪುರಾಣ ಪ್ರಸಿದ್ಧ ಕಾಲಭೈರೇಶ್ವರ ಸನ್ನಿಧಿ ಸಾಕ್ಷಿಯಾಯಿತು.
ಮಾಲೂರು ತಾಲೂಕಿನ ಯಶವಂತಪುರದ ಅನಿಲ್ ಕುಮಾರ್ (26) ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ವಿಜಯಪುರದ ವರಲಕ್ಷ್ಮಿ (22) ಅವರ ವಿವಾಹ ಸೋಮವಾರ ನೆರವೇರಿತು.
ಗುರುವಾರವಷ್ಟೇ ಇವರಿಬ್ಬರ ನಿಶ್ಚಿತಾರ್ಥ ನೆರವೇರಿತ್ತು. ಸಾಮಾಜಿಕ ತಾಣಗಳಲ್ಲಿ ಫೋಟೋಗಳು ವೈರಲ್ ಆಗಿದ್ದವು. ಇದೀಗ ಮದುವೆ ಫೋಟೋಗಳಿಗೂ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.