
ನವದೆಹಲಿ (ಮಾ.02): ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕ್ರಾಂತಿಕಾರಿ ಕಲ್ಯಾಣ ಯೋಜನೆಯೊಂದನ್ನು ಘೋಷಿಸಿದ್ದಾರೆ. ದೆಹಲಿ ನಿವಾಸಿಗಳಿಗೆ ಉಚಿತ ರೇಡಿಯೋಲಜಿ ಪರೀಕ್ಷೆ ನಡೆಸುವುದಾಗಿ ಹೇಳಿದ್ದಾರೆ.
ದೆಹಲಿ ಜನತೆಗೆ ಕೈಗೆಟಕುವಂತೆ ಹಾಗೂ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ನೀಡಲು ನಾವು ಬದ್ಧರಾಗಿದ್ದೇವೆ ಎಂದು ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಹೇಳಿದ್ದಾರೆ.
ಎಂಆರ್ ಐ, ಸಿಟಿ, ಪಿಇಟಿ ಸ್ಕ್ಯಾನ್ ಮತ್ತು ಅಲ್ಟ್ರಾ ಸೌಂಡ್ ಸೇರಿದಂತೆ ಎಲ್ಲಾ ರೀತಿಯ ರೆಡಿಯೋಲಜಿ ಪರೀಕ್ಷೆಯನ್ನು ಉಚಿತವಾಗಿ ನಡೆಸುವುದಾಗಿ ದೆಹಲಿ ಸರ್ಕಾರ ಜಾಹಿರಾತು ನೀಡಿದೆ. ಜನರ ಆದಾಯವನ್ನು ಲೆಕ್ಕಕ್ಕೆ ತೆಗೆದುಕೊಳ್ಳದೇ ಎಲ್ಲರಿಗೂ ಉಚಿತವಾಗಿ ಈ ಸೇವೆ ನೀಡಲು ಮುಂದಾಗಿದೆ. ಇದೊಂದು ಕ್ರಾಂತಿಕಾಇ ಹೆಜ್ಜೆ ಎಂದು ಸತ್ಯೇಂದರ್ ಜೈನ್ ಹೇಳಿದ್ದಾರೆ.
ಆರೋಗ್ಯ ಇಲಾಖೆ ಗೊತ್ತುಪಡಿಸಿದ 30 ಸರ್ಕಾರಿ ಹಾಗೂ 23 ಪಾಲಿಕ್ಲಿನಿಕ್ ಆಸ್ಪತ್ರೆಯ ವೈದ್ಯರು ಉಲ್ಲೇಖಿಸಿದ ರೋಗಿಗಳು ಸಹ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.