ಬಿಜೆಪಿ ಭೀಷ್ಮ ಅಡ್ವಾಣಿಗೆ ಮತ್ತೆ ಸ್ಥಾನ: ಈ ಸಲ ಏನು?

Published : Sep 12, 2018, 06:39 PM ISTUpdated : Sep 19, 2018, 09:24 AM IST
ಬಿಜೆಪಿ ಭೀಷ್ಮ ಅಡ್ವಾಣಿಗೆ ಮತ್ತೆ ಸ್ಥಾನ: ಈ ಸಲ ಏನು?

ಸಾರಾಂಶ

ಬಿಜೆಪಿ ಹಿರಿಯ ನೇತಾರ ಎಲ್.ಕೆ. ಅಡ್ವಾಣಿಗೆ ಮತ್ತೆ ಅಧಿಕಾರ! ಲೋಕಸಭೆಯ ನೀತಿ ಸಂಹಿತೆ ಸಮಿತಿಯ ಮುಖ್ಯಸ್ಥರಾಗಿ ಪುನರಾಯ್ಕೆ! ಸಂಸತ್ ಸದಸ್ಯರ ಅಶಿಸ್ತಿಗೆ ಸಂಬಂಧಿಸಿದ ದೂರುಗಳ ಪರಿಶೀಲನೆ! ವಿವಿಧ ಸಮಿತಿಗಳ ಮುಖ್ಯಸ್ಥರಾಗಿ ಆಯ್ಕೆಯಾದ ಹಲವು ಸಂಸದರು

ನವದೆಹಲಿ(ಸೆ.12): ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಲೋಕಸಭೆಯ ನೀತಿ ಸಂಹಿತೆ ಸಮಿತಿಯ ಮುಖ್ಯಸ್ಥರನ್ನಾಗಿ ಸ್ಪೀಕರ್ ಸುಮಿತ್ರಾ ಮಹಾಜನ್ ಪುನರ್ ನೇಮಕಗೊಳಿಸಿದ್ದಾರೆ.

ಸಂಸತ್ ಸದಸ್ಯರ ಅಶಿಸ್ತಿಗೆ ಸಂಬಂಧಿಸಿದ ದೂರುಗಳನ್ನು ಈ ಸಮಿತಿ ಪರಿಶೀಲನೆ ನಡೆಸಲಿದೆ. ಸದಸ್ಯರು ಶಿಸ್ತು , ಅಶಿಸ್ತಿಗೆ ಸಂಬಂಧಿಸಿದಂತೆ ಈ ಸಮಿತಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸಲು ಮುಕ್ತ ಅವಕಾಶ ಹೊಂದಿದ್ದು, ತನ್ನ ಸಲಹೆ ಶಿಫಾರಸ್ಸು ಮಾಡಬಹುದು ಎಂದು ಹೇಳಲಾಗಿದೆ.

ಈ ಮಧ್ಯೆ ರಮೇಶ್ ಪೊಖ್ರಿಯಾಲ್ ನಿಶಾಂಕ್ ಅವರನ್ನು  ಸರ್ಕಾರದ ಭರವಸೆಯ ಸಮಿತಿಯ ಮುಖ್ಯಸ್ಥರನ್ನಾಗಿ,  ಪಿ. ಕರುಣಾಕರನ್ ಅವರನ್ನು ಹಾಲಿ ಸದನದಿಂದ  ಗೈರಾದ ಸದಸ್ಯರ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ.

ಅದರಂತೆ ಚಂದ್ರಕಾಂತ್ ಬಿ, ಖೈರ್ ಅವರನ್ನು  ಕಾಗದ ಪತ್ರಗಳ ಮಂಡನೆ ಸಮಿತಿ ಹಾಗೂ ದಿಲೀಪ್ ಕುಮಾರ್ ಮನ್ಸುಕ್ ಲಾಲ್ ಗಾಂಧಿ ಅವರನ್ನು ಅಧೀನ ಶಾಸನ ಸಮಿತಿ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ ಎಂದು ಲೋಕಸಭೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾದಂತಿದೆ ರಾಜ್ಯದ ಸ್ಥಿತಿ: ಎಂ.ಪಿ.ರೇಣುಕಾಚಾರ್ಯ ಟೀಕೆ
ಸಹವಾಸ, ಒತ್ತಾಯಕ್ಕೆ ಗಾಂಜಾ ಜಾಲಕ್ಕೆ ವಿದ್ಯಾರ್ಥಿಗಳು!