'ಸಾಲ ಮನ್ನಾ ಮಾಡುವುದು ಫ್ಯಾಷನ್ ಆಗಿದೆ' ವೆಂಕಯ್ಯ ನಾಯ್ಡು ವಿವಾದಾತ್ಮಕ ಹೇಳಿಕೆ

Published : Jun 22, 2017, 01:00 PM ISTUpdated : Apr 11, 2018, 12:39 PM IST
'ಸಾಲ ಮನ್ನಾ ಮಾಡುವುದು ಫ್ಯಾಷನ್ ಆಗಿದೆ' ವೆಂಕಯ್ಯ ನಾಯ್ಡು ವಿವಾದಾತ್ಮಕ ಹೇಳಿಕೆ

ಸಾರಾಂಶ

ಸಿದ್ದರಾಮಯ್ಯ ಸಾಲ ಮನ್ನಾ ಮಾಡಿದ ಬೆನ್ನಲ್ಲೇ ಕೇಂದ್ರ ಸಚಿವ ವೆಂಕಯ್ಯ ನಾಯ್ಡು  ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಸಾಲ ಮನ್ನಾ ಮಾಡೋದು ಫ್ಯಾಷನ್ ಆಗಿದೆ ಎಂದಿರುವ ನಾಯ್ಡು ಅವರ ಮಾತು ರಾಜ್ಯ ಸರ್ಕಾರವನ್ನು ಲೇವಡಿ ಮಾಡಿದಂತಿದೆ.

ಮುಂಬೈ(ಜೂ.22): ಸಿದ್ದರಾಮಯ್ಯ ಸಾಲ ಮನ್ನಾ ಮಾಡಿದ ಬೆನ್ನಲ್ಲೇ ಕೇಂದ್ರ ಸಚಿವ ವೆಂಕಯ್ಯ ನಾಯ್ಡು  ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಸಾಲ ಮನ್ನಾ ಮಾಡೋದು ಫ್ಯಾಷನ್ ಆಗಿದೆ ಎಂದಿರುವ ನಾಯ್ಡು ಅವರ ಮಾತು ರಾಜ್ಯ ಸರ್ಕಾರವನ್ನು ಲೇವಡಿ ಮಾಡಿದಂತಿದೆ.

ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಕೇಂದ್ರ ನಗರಾಭಿವೃಧ್ಧಿ ಸಚಿವ ವೆಂಕಯ್ಯ ನಾಯ್ಡು ಸಾಲಮನ್ನಾ ವಿಚಾರವನ್ನು ಪ್ರಸ್ತಾಪಿಸುತ್ತಾ 'ಸಾಲಮನ್ನಾ ಮಾಡುವುದು ಈಗ ಶೋಕಿಯಾಗಿ ಬಿಟ್ಟಿದೆ. ಸಾಲ ಮನ್ನಾವೊಂದೇ ಎಲ್ಲದಕ್ಕೂ ಪರಿಹಾರವಲ್ಲ. ನಾವು ರೈತರ ಮೇಲೆ ಕಾಳಜಿ ವಹಿಸಬೇಕು. ಅನಿವಾರ್ಯ ಪರಿಸ್ಥಿತಿಯಲ್ಲಿ ಮಾತ್ರ ಸಾಲಮನ್ನಾ ಮಾಡಬೇಕು' ಎಂದಿದ್ದಾರೆ. ನಿನ್ನೆಯಷ್ಟೇ ಕರ್ನಾಟಕ ಸರ್ಕಾರ ರೈತರ ಸಾಲ ಮನ್ನಾ ಮಾಡಿದ್ದು, ಇದರ ಬೆನ್ನಲ್ಲೇ ಕೇಂದ್ರ ಸಚಿವರು ಇಂತಹ ಹೇಳಿಕೆ ನೀಡಿರುವುದು ರಾಜ್ಯ ಸರ್ಕಾರದ ನಡೆಯನ್ನು  ಲೇವಡಿ ಮಾಡಿದಂತಿದೆ.

ಿದೇ ಸಂದರ್ಭದಲ್ಲಿ ವೆಂಕಯ್ಯ ನಾಯ್ಡು ಏರ್ ಇಂಡಿಯಾ ವಿಚಾರದ ಕುರಿತಾಗಿಯೂ ಮಾತನಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೋದಿ-ಪುಟಿನ್‌ ಸೆಲ್ಫಿ ತೋರಿಸಿ ಟ್ರಂಪ್‌ ವಿರುದ್ಧ ಸಂಸದೆಯ ಕಿಡಿ
ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ