
ಬೆಂಗಳೂರು : ಮೈಸೂರು, ಶಿವಮೊಗ್ಗ, ತುಮಕೂರು ನಗರ ಪಾಲಿಕೆ, ನಗರ ಸಭೆಗಳು, ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿ ಸೇರಿದಂತೆ 105 ಸ್ಥಳೀಯ ಸಂಸ್ಥೆಗಳಿಗೆ ನಡೆದಿರುವ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುವ ಕಡೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲು ಸಮನ್ವಯ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕಾಂಗ್ರೆಸ್ಗೆ ಬಹುಮತ ಬರುವ ಕಡೆ ಕಾಂಗ್ರೆಸ್ ಅಧಿಕಾರ ರಚಿಸಲಿದೆ. ಜೆಡಿಎಸ್ ಬಹುಮತ ಬರುವ ಕಡೆ ಜೆಡಿಎಸ್ ಆಡಳಿತ ರಚಿಸುತ್ತದೆ. ಅತಂತ್ರ ಸ್ಥಿತಿ ನಿರ್ಮಾಣವಾದ ಕಡೆ ಕಾಂಗ್ರೆಸ್-ಜೆಡಿಎಸ್ ಕೂಡಿ ಆಡಳಿತ ನಡೆಸಲು ತೀರ್ಮಾನಿಸಲಾಗಿದೆ.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಫ್ರೆಂಡ್ಲಿ ಫೈಟ್ ಮಾಡಿದ್ದರೂ, ಫಲಿತಾಂಶ ಅತಂತ್ರವಾಗಿರುವ ಕಡೆ ಜೆಡಿಎಸ್-ಕಾಂಗ್ರೆಸ್ ಜತೆಗೂಡಿ ಅಧಿಕಾರ ಹಿಡಿಯಲು ನಿರ್ಧಾರವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.