
ಮಡಿಕೇರಿ (ಅ.19): ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಪಾಕಿಸ್ತಾನವನ್ನು ಹೊಗಳಿದ ಹಿನ್ನಲೆಯಲ್ಲಿ ದೇಶದ್ರೋಹದ ಆರೋಪದ ಮೇಲೆ ವಕೀಲ ವಿಠಲ್ ಗೌಡ ಸೋಮವಾರಪೇಟೆಯ ಜೆಎಂಎಫ್ ಸಿ ಕೋರ್ಟ್ ನಲ್ಲಿ ಖಾಸಗಿ ದೂರನ್ನು ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಸೆಪ್ಟೆಂಬರ್ 27ರಂದು ದೂರನ್ನು ಕೈಗೆತ್ತಿಕೊಂಡಿದ್ದ ನ್ಯಾಯಾಲಯ, ದೂರುದಾರ ವಿಠಲ್ ಗೌಡರಿಗೆ ನಟಿ ರಮ್ಯಾ ನೀಡಿರುವ ಹೇಳಿಕೆಯನ್ನು ದೇಶದ್ರೋಹ ಹೇಗೆ ಆಗಲಿದೆ ಮತ್ತು ಹೇಳಿಕೆ ನೀಡಿರುವುದಕ್ಕೆ ಸಾಕ್ಷಿ ಒದಗಿಸುವಂತೆ ತಿಳಿಸಿತ್ತು.
ಹೀಗಾಗಿ ಇವತ್ತು ಸೋಮವಾರಪೇಟೆ ನ್ಯಾಯಾಲಯಕ್ಕೆ ದೂರದಾರ ವಿಠಲ್ ಗೌಡ ಹಾಜರಾಗಲಿದ್ದು,ಅಗತ್ಯ ದಾಖಲೆ ಒದಗಿಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.