
ನವದೆಹಲಿ[ಜ.08] ನರೇಂದ್ರ ಮೋದಿ ಮತ್ತು ಕೇಂದ್ರ ಸರಕಾರದ ದಿಟ್ಟ ಕ್ರಮಕ್ಕೆ ಲೋಕಸಭೆ ಒಪ್ಪಿಗೆ ನೀಡಿದೆ. ಮೇಲ್ವರ್ಗದವರಿಗೆ ಶೇ. 10ರಷ್ಟು ಮೀಸಲು ನೀಡುವ ಮಸೂದೆ ಲೋಕಸಭೆಯಲ್ಲಿ ಪಾಸ್ ಆಗಿದೆ.
ನಿರೀಕ್ಷೆಯಂತೆ ಮಂಗಳವಾರ ಮಸೂದೆ ಬಿಲ್ ಲೋಕಸಭೆಯಲ್ಲಿ ಪಾಸ್ ಆಗಿದೆ. ಸೋಮವಾರ ನವದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದ್ದು ಇಂದು ಮಂಡನೆ ಮಾಡಲಾಯಿತು.
ಬಂದ್ನಿಂದ ರಾಜ್ಯಕ್ಕಾದ ನಷ್ಟವೆಷ್ಟು ಗೊತ್ತಾ?
ಈ ಮಸೂದೇ ಜಾರಿಗೆ ಬಂದರೆ ಉನ್ನತ ವರ್ಗಗಳಾದ ಜಾಟ್, ಗುಜ್ಜಾರ್, ರಜಪೂತ್, ಬನಿಯಾ, ಬ್ರಾಹ್ಮಣ ಸಮುದಾಯಕ್ಕೆ ಅನುಕೂಲವಾಗಲಿದೆ.
ಮೇಲ್ಜಾತಿ ಬಡವರಿಗೂ ಉದ್ಯೋಗದಲ್ಲಿ ಮೀಸಲಾತಿ, ಮೋದಿ ಘೋಷಣೆ..!
ಈ ಮೀಸಲಾತಿಗೆ ಇರುವ ಕೆಲ ಷರತ್ತುಗಳು
* ಶೇ.10ರಷ್ಟು ಮೀಸಲಾತಿ ಪಡೆಯಬೇಕಿದ್ದರೆ ಅವರ ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕೆಳಗಿರಬೇಕು.
* 5 ಎಕರೆ ಭೂಮಿ, 1000 ಚದುರ ಅಡಿಗಿಂತ ಕಡಿಮೆ ವಿಸ್ತೀರ್ಣ ಮನೆ ಹೊಂದಿರಬೇಕು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.