ಪಕ್ಷ, ರಾಜಕೀಯ ಬಿಟ್ಟು ಒಂದಾಗಿ ಇರೋಣ : ಪ್ರಜ್ವಲ್ ಗೆ ತೇಜಸ್ವಿ ಸಲಹೆ

Published : May 25, 2019, 09:02 AM IST
ಪಕ್ಷ, ರಾಜಕೀಯ ಬಿಟ್ಟು ಒಂದಾಗಿ ಇರೋಣ : ಪ್ರಜ್ವಲ್ ಗೆ ತೇಜಸ್ವಿ ಸಲಹೆ

ಸಾರಾಂಶ

ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿದ್ದ ತೇಜಸ್ವಿ ಸೂರ್ಯ ಸಂಸದರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. 

ಬೆಂಗಳೂರು :  ಸಂವಿಧಾನ ಬದಲಾಯಿಸುವ ಪ್ರಯತ್ನವನ್ನು ಬಿಜೆಪಿ ಮಾಡಿಲ್ಲ ಎಂದು ನೂತನ ಸಂಸದ ತೇಜಸ್ವಿ ಸೂರ್ಯ ಹೇಳಿದರು.

ಲೋಕಸಭೆಗೆ ಆಯ್ಕೆಯಾದ ಬಳಿಕ ವಿಧಾನಸೌಧ ಬಳಿ ಇರುವ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ತಮ್ಮ ಮೇಲೆ ಇಟ್ಟಿದ್ದ ಭರವಸೆಯನ್ನು ಜನ ದುಪ್ಪಟ್ಟು ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದನಾಗಿ ಮೊದಲ ಕೆಲಸ ಮಾಡಿದ್ದೇನೆ. ಪ್ರತಿಯೊಬ್ಬ ಸಂಸದ ತನ್ನ ಕೆಲಸ ಪ್ರಾರಂಭ ಮಾಡುವುದು ಅಂಬೇಡ್ಕರ್‌ ಅವರ ಸಂವಿಧಾನದ ಮೇಲೆ ಪ್ರಮಾಣ ಮಾಡಿ. ಕಾಲೇಜು ದಿನಗಳಿಂದಲೂ ಅಂಬೇಡ್ಕರ್‌ ನನಗೆ ಆದರ್ಶ ವ್ಯಕ್ತಿ. ಅಂಬೇಡ್ಕರ್‌ ಅವರ ಜೀವನ ಸಾಧನೆಗಳು ನನಗೆ ಸ್ಫೂರ್ತಿ. ಹೀಗಾಗಿ ಸಂಸದನಾಗಿ ಆಯ್ಕೆಯಾದ ಕೂಡಲೇ ಅಂಬೇಡ್ಕರ್‌ ಅವರ ಪ್ರತಿಮೆ ಪುಷ್ಪ ನಮನ ಸಲ್ಲಿಸಿದ್ದೇನೆ ಎಂದರು.

ಲೋಕಸಭಾ ಚುನಾವಣೆ ಫಲಿತಾಂಶದಿಂದ ಇಡೀ ಭಾರತ ಗೆದ್ದಿದೆ. ಚುನಾವಣೆಯ ಗೆಲುವು ಭಾರತದ ಸಂವಿಧಾನದ ಗೆಲುವು ಎಂದು ಮೋದಿ ಹೇಳಿದ್ದಾರೆ ಎಂದು ಹೇಳಿದರು.

ಹಾಸನ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಪ್ರಜ್ವಲ್‌ ರೇವಣ್ಣ ರಾಜೀನಾಮೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಜನಾದೇಶ ಕೊಟ್ಟು ಆಗಿದೆ. ಮಾಜಿ ಪ್ರಧಾನಿಯೂ ಆಗಿರುವ ಎಚ್‌.ಡಿ.ದೇವೇಗೌಡ ಅವರ ಮಾರ್ಗದರ್ಶನದಲ್ಲಿ ನೀವು ಲೋಕಸಭೆಯಲ್ಲಿ ಇರಬೇಕು. ಚುನಾವಣೆ ಮುಗಿದಿದೆ. ಪಕ್ಷ ರಾಜಕೀಯ ಬಿಟ್ಟು ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಸಂಸತ್ತಿನಲ್ಲಿ ಕನ್ನಡದ ಶಕ್ತಿಯಾಗಿ ನೀವು ಇರಬೇಕು. ಇದು ಸ್ನೇಹಿತನಾಗಿ ಪ್ರಜ್ವಲ್‌ಗೆ ತಮ್ಮ ಸಲಹೆ ಎಂದು ತೇಜಸ್ವಿ ಸೂರ್ಯ ಇದೇ ವೇಳೆ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

sculptor makeup: ಹುಡುಗರೇ ಆಹಾ ಚೂಪಾದ ಮೂಗು ಎಂಥಾ ಬ್ಯೂಟಿ ಅಂತ ಮರುಳಾಗದಿರಿ ಜೋಕೆ..!
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ ಎಂದ ಪಾಕಿಸ್ತಾನ ಸೇನೆ, ಕೋಲಾಹಲ ಶುರು