ಕಾಂಗ್ರೆಸ್ ನಾಯಕರಿಗೆ ಹೊಸ ಹೊಣೆಗಾರಿಕೆ

Published : Sep 16, 2018, 11:09 AM ISTUpdated : Sep 19, 2018, 09:27 AM IST
ಕಾಂಗ್ರೆಸ್ ನಾಯಕರಿಗೆ ಹೊಸ ಹೊಣೆಗಾರಿಕೆ

ಸಾರಾಂಶ

ವಿವಿಧ ರಾಜಕೀಯ ಪಕ್ಷಗಳು ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿವೆ. ಇದೀಗ ಕಾಂಗ್ರೆಸ್ ಮುಖಂಡರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೂತನ ಜವಾಬ್ದಾರಿ ನೀಡಿದ್ದಾರೆ. 

ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ನಾಯಕರಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿವಿಧ ಹೊಣೆಗಾರಿಕೆ ಗಳನ್ನು ವಹಿಸಿದ್ದಾರೆ. ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನು ಪ್ರಣಾ ಳಿಕೆ ಸಮಿತಿ ಮುಖ್ಯಸ್ಥರನ್ನಾಗಿ ನೇಮಕ ಮಾಡಿ ರುವ ಅವರು, ಕರ್ನಾಟಕದ ರಾಜ್ಯಸಭಾ ಸದಸ್ಯ ರಾಜೀವ್ ಗೌಡ ಅವರನ್ನು ಸಂಚಾಲಕರನ್ನಾಗಿ ನೇಮಿ ಸಿದ್ದಾರೆ. 

ವಿವಿಧ ಪಕ್ಷಗಳ ಜತೆ ಸಮನ್ವಯತೆ ಸಾಧಿಸಲು ಸಮನ್ವಯ ಸಮಿತಿಯೊಂದನ್ನು ರಚಿಸಿದ್ದು, ಎ.ಕೆ. ಆ್ಯಂಟನಿ ಮುಖ್ಯಸ್ಥ ಹಾಗೂ ಕರ್ನಾಟಕದ ಜೈರಾಮ್ ರಮೇಶ್ ಸಂಚಾಲಕರಾಗಿದ್ದಾರೆ. ಪ್ರಚಾರ ಸಮಿತಿಗೆ ಆನಂದ ಶರ್ಮಾ ಅಧ್ಯಕ್ಷರಾಗಿದ್ದು, ಪವನ್ ಖೇರಾ ಅವರು ಸಂಚಾಲಕರಾಗಿ ನೇಮಕಗೊಂಡಿದ್ದಾರೆ. 

ಕಳೆದ ತಿಂಗಳು ಪ್ರಚಾರ  ಸಮಿತಿ, ಕೋರ್ ಕಮಿಟಿ ಹಾಗೂ ಪ್ರಣಾಳಿಕೆ ಸಮಿತಿ ಗಳನ್ನು ರಾಹುಲ್ ರಚಿಸಿದ್ದರು. ಮಲ್ಲಿಕಾರ್ಜುನ ಖರ್ಗೆ, ರಮ್ಯಾ, ರಾಜೀವ್ ಗೌಡ, ಜೈರಾಂ ರಮೇಶ್ ಸೇರಿದಂತೆ ಹಲವರನ್ನು ನೇಮಕ ಮಾಡಿದ್ದರು. ಈಗ ಅವುಗಳ ಮುಖ್ಯಸ್ಥ ಹಾಗೂ ಸಂಚಾಲಕ ಹುದ್ದೆಗೆ ನೇಮಕಗಳನ್ನು ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?