
ಬೆಂಗಳೂರು : ಲೋಕಸಭೆ ಚುನಾವಣೆಗೆ ಬಾಗಲಕೋಟೆ ಅಭ್ಯರ್ಥಿ ಆಯ್ಕೆ ಸಂಬಂಧ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲಾ ಮುಖಂಡರೊಂದಿಗೆ ಸಭೆ ನಡೆಸಿದ್ದು, ನಾಲ್ಕು ಮಂದಿ ಸಂಭಾವ್ಯರ ಪಟ್ಟಿಸಿದ್ಧಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಅಭಿಪ್ರಾಯ ಕ್ರೋಡೀಕರಿಸಿದ ಬಳಿಕ ವೀಣಾ ಕಾಶಪ್ಪನವರ್, ಬಾಯಕ್ಕ ಮೇಟಿ, ಮಹಂತೇಶ್ ಉದುಪುಡಿ, ನಂಜಯ್ಯನ ಮಠ ಬಗ್ಗೆ ಹೆಚ್ಚಿನ ನಾಯಕರು ಒಲವು ತೋರಿದ್ದರಿಂದ ಈ ನಾಲ್ಕು ಮಂದಿ ಸಂಭಾವ್ಯರ ಪಟ್ಟಿಸಿದ್ಧಪಡಿಸಿಲಾಗಿದೆ. ಅಂತಿಮವಾಗಿ ಮತ್ತೊಂದು ಸುತ್ತಿನ ಚರ್ಚೆ ನಡೆಸಿ ಮೂವರ ಹೆಸರನ್ನು ಕೆಪಿಸಿಸಿಗೆ ಕಳುಹಿಸಲಾಗುವುದು. ಕೆಪಿಸಿಸಿಯು ಈ ಪಟ್ಟಿಯನ್ನು ದೆಹಲಿಯಲ್ಲಿ ನಡೆಯಲಿರುವ ಚುನಾವಣಾ ಪರಿಶೀಲನಾ ಸಮಿತಿಗೆ ಕಳುಹಿಸಲಿದೆ ಎಂದು ಮೂಲಗಳು ತಿಳಿಸಿವೆ.
ಬಾಗಲಕೋಟೆಯಿಂದ ಕೈ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹಲವು ಮಂದಿ ಆಕಾಂಕ್ಷಿಗಳು ಲಾಬಿ ನಡೆಸುತ್ತಿದ್ದಾರೆ. ಶುಕ್ರವಾರದ ಸಭೆಯಲ್ಲಿ ಒಟ್ಟು 12 ಮಂದಿ ಆಕಾಂಕ್ಷಿಗಳ ಬಗ್ಗೆ ಗಂಭೀರ ಚರ್ಚೆ ನಡೆಸಲಾಗಿದ್ದು, ಕೊನೆಗೆ 4 ಹೆಸರುಗಳು ಅಂತಿಮಗೊಂಡವೆಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.