ಪಕ್ಷದ ಮುಖಂಡನ ವಿರುದ್ಧ ಅಸಮಾಧಾನ : ಸಂಸದ ರಾಜೀನಾಮೆ

By Web DeskFirst Published Nov 21, 2018, 12:34 PM IST
Highlights

ಪಕ್ಷದ ಮುಖಂಡನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಸಂಸದರೋರ್ವರು ಇದೀಗ ಪಕ್ಷಕ್ಕೆ ತಮ್ಮ ರಾಜೀನಾಮೆ ನೀಡಿ ಚುನಾವಣೆ ಹೊಸ್ತಿಲಲ್ಲೇ ಶಾಕ್ ನೀಡಿದ್ದಾರೆ. 

ಹೈದ್ರಾಬಾದ್ :  ತೆಲಂಗಾಣದಲ್ಲಿ ಚುನಾವಣೆ ನಡೆಯುತ್ತಿದ್ದು, ಇದೇ ವೇಳೆ  ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷಕ್ಕೆ ಹಿನ್ನಡೆ ಉಂಟಾಗಿದೆ. 

ಟಿಆರ್ ಎಸ್ ಸಂಸದ ಕೊಂಡ ವಿಶ್ವೇಶ್ವರ ರೆಡ್ಡಿ ಪಕ್ಷವನ್ನು ತೊರೆದಿದ್ದಾರೆ. ಚೆವೆಲ್ಲಾ ಕ್ಷೇತ್ರದ ಸಂಸದರಾಗಿದ್ದ ರೆಡ್ಡಿ ಪಕ್ಷದಲ್ಲಿನ ಕೆಲವು ನಡೆಯಿಂದ ತಮಗೆ ಅಸಮಾಧಾನ ಉಂಟಾಗಿದ್ದು ಈ ನಿಟ್ಟಿನಲ್ಲಿ ಪಕ್ಷವನ್ನು ತೊರೆದಿದ್ದಾಗಿ ಹೇಳಿದ್ದಾರೆ. 

ಅಲ್ಲದೇ ಪಕ್ಷದ ಮುಖಂಡರಾಗಿರುವ ಚಂದ್ರಶೇಖರ್ ರಾವ್ ಅವರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ ಅವರು ಈ ನಿರ್ಧಾರವನ್ನು ತೆಗೆದುಕೊಳ್ಳುವ ಮುನ್ನ ಸಾಕಷ್ಟು ಯೋಚಿಸಿದ್ದಾಗಿಯೂ ಕೂಡ ಹೇಳಿದ್ದಾರೆ. 

ತಮ್ಮ ಸಿದ್ಧಾಂತಗಳು ಹೊಂದಾಣಿಕೆಯಾಗದ ಕಾರಣ ಪಕ್ಷವನ್ನು ತೊರೆದಿದ್ದಾಗಿಯೂ ಅವರು ಹೇಳಿದ್ದಾರೆ. 

ತೆಲಂಗಾಣದಲ್ಲಿ ಮುಂದಿನ ಡಿಸೆಂಬರ್ 7 ರಂದು ಚುನಾವಣೆ ನಡೆಯುತ್ತಿದ್ದು ಡಿಸೆಂಬರ್ 11 ರಂದು ಫಲಿತಾಂಶ ಪ್ರಕಟವಾಗುತ್ತಿದೆ. 

click me!