
ನವದೆಹಲಿ(ಜು.25): ಸಾಕಷ್ಟು ಚರ್ಚೆಗೊಳಗಾಗಿರುವ ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣಾ ಕಾಯ್ದೆ ಮಸೂದೆ 2019ನ್ನು ಲೋಕಸಭೆಯಲ್ಲಿ ಮೂರನೇ ಬಾರಿ ಅಂಗೀಕರಿಸಲಾಗಿದೆ.
ಮಸೂದೆ ಮಂಡಿಸಿ ಮಾತನಾಡಿದ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್, ಈ ಮಸೂದೆ ಧರ್ಮಾಧಾರಿತ ಅಲ್ಲ, ಬದಲಿಗೆ ಮಹಿಳೆಯರ ಸುರಕ್ಷತೆ ಮತ್ತು ಸಮಾನತೆಗಾಗಿ ಜಾರಿಯಾಗಬೇಕಿದೆ ಎಂದು ಪ್ರತಿಪಾದಿಸಿದರು.
ಪಾಕಿಸ್ತಾನ ಹಾಗೂ ಮಲೇಷ್ಯಾ ಸೇರಿದಂತೆ 20 ಮುಸ್ಲಿಂ ರಾಷ್ಟ್ರಗಳೇ ತ್ರಿವಳಿ ತಲಾಖ್ ಅನ್ನು ನಿಷೇಧಿಸಿದ್ದು, ಜಾತ್ಯತೀತ ಭಾರತ ಏಕೆ ನಿಷೇಧಿಸಬಾರದು ಎಂದು ರವಿಶಂಕರ್ ಪ್ರಸಾದ್ ಪ್ರಶ್ನಿಸಿದ್ದಾರೆ.
ರಾಜ್ಯಸಭೆಯಲ್ಲಿ ಬಹುಮತವಿಲ್ಲದ ಕಾರಣ ಈ ಹಿಂದೆ ಎರಡು ಬಾರಿ ವಿಧೇಯಕ ಅಂಗೀಕಾರ ಆಗಿರಲಿಲ್ಲ. ಈ ಬಾರಿಯೂ ವಿಧೇಯಕಕ್ಕೆ ವಿರೋಧ ಪಕ್ಷಗಳು ಲೋಕಸಭೆಯಲ್ಲಿ ವಿರೋಧ ವ್ಯಕ್ತಪಡಿಸಿವೆ.
ಮಸೂದೆಯಲ್ಲಿರುವ ಅಂಶಗಳನ್ನು ವಿರೋಧಿಸಿ ಕಾಂಗ್ರೆಸ್, ಜೆಡಿಯು, ಟಿಎಂಸಿ ಪಕ್ಷಗಳ ಸಂಸದರು ಸಭಾತ್ಯಾಗ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.