
ಬೆಂಗಳೂರು(ಎ.06): ಬಿಗ್ಬಾಸ್ ವಿನ್ನರ್ ಪ್ರಥಮ್ ಆತ್ಮಹತ್ಯೆ ಯತ್ನ ಪ್ರಕರಣ ಮತ್ತೆ ಹೊಸ ತಿರುವು ಪಡೆದುಕೊಂಡಿದೆ. ನಿನ್ನೆ ಪ್ರಥಮ್ ವಿರುದ್ಧ ದೂರು ದಾಖಲಿಸಿದ್ದ ಸ್ನೇಹಿತ ಲೋಕಿ ಈಗ ಸಂಧಾನಕ್ಕೆ ಮುಂದಾಗಿದ್ದಾನೆ.
ಬಿಗ್ಬಾಸ್ ಪ್ರಥಮ್'ಗೂ ಮತ್ತು ಆತನ ಸ್ನೇಹಿತ ಲೋಕಿಗೂ ಸಾಮಾಜಿಕ ಜಾಲತಾಣದಲ್ಲಿ ಹಾಕಿರೋ ವಿಡಿಯೋ ವಿಚಾರಕ್ಕೆ ನಿನ್ನೆ ಗಲಾಟೆಯಾಗಿತ್ತು. ಗಲಾಟೆಯಲ್ಲಿ ಪ್ರಥಮ್ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ ಅಂತ ಲೋಕಿ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. ದೂರು ದಾಖಲಾಗಿದ್ದು ಗೊತ್ತಾದ ಕೂಡಲೇ ಬಿಗ್ಬಾಸ್ ಪ್ರಥಮ್ ಫೇಸ್ ಬುಕ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದ. ನನಗೆ ಕೆಲವರು ಮಾನಸಿಕ ಕಿರುಕುಳ ನೀಡುತ್ತಿದ್ದಾರೆಂದು ನಿದ್ರೆ ಮಾತ್ರೆ ಸೇವಿಸೋ ಮೂಲಕ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದ.
ಈ ವಿಚಾರ ತಿಳಿಯುತ್ತಿದಂತೆ ಆಸ್ಪತ್ರೆಗೆ ಪ್ರಥಮ್ ತಂದೆ ಮಲ್ಲಣ , ನಟಿ ಸಂಜನಾ ಆಗಮಿಸಿ ಪ್ರಥಮ್ ಆರೋಗ್ಯ ವಿಚಾರಿಸಿದ್ದರು. ಇನ್ನು ಪ್ರಥಮ್ ವಿರುದ್ಧ ಆರೋಪ ಮಾಡಿದ್ದ ಗೆಳೆಯ ಲೋಕಿ ಸಹ ಆಸ್ಪತ್ರೆಗೆ ಭೇಟಿ ನೀಡಿದ. ಪ್ರಥಮ್ ಆರೋಗ್ಯ ವಿಚಾರಿಸಿ ಪೊಲೀಸರ ಸಮ್ಮುಖದಲ್ಲಿ ರಾಜಿಯಾಗುತ್ತೇನೆ ಎಂದು ಹೇಳಿದ.
ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಥಮ್ ಇವತ್ತು ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗುವ ಸಾಧ್ಯತೆಯಿದೆ .
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.