
ಹಾಸನ : ದೇಶದಲ್ಲಿ ಲೋಕಪಾಲರ ನೇಮಕ ಮಾಡಲಾಗಿದ್ದು, ಈಗ ನೇಮಕವಾಗಿರೋ ಲೋಕಪಾಲ್ ಗೆ ಕಣ್ಣು,ಇಲ್ಲಾ,ಕಿವಿ.ಕೈ ಕಾಲು ಏನೂ ಇಲ್ಲವೆಂದು ಕೇಂದ್ರದ ನಡೆ ವಿರುದ್ದ ಪರೋಕ್ಷವಾಗಿ ಟೀಕಿಸಿದ ನಿವೃತ್ತಿ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಟೀಕಿಸಿದ್ದಾರೆ.
ಕರ್ನಾಟಕದ ಲೋಕಾಯುಕ್ತಕ್ಕೂ ಲೋಕಪಾಲ್ ಗೂ ಯಾವುದೇ ಸಂಬಂಧವಿಲ್ಲ. ಸುಪ್ರೀಂಕೋರ್ಟ್ ಆದೇಶದಂತೆ ಲೋಕಪಾಲ್ ರಚನೆ ಮಾಡಲಾಗಿದೆ ಎಂದು ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಪಿ.ಸಿ.ಘೋಷ್ ದೇಶದ ಮೊದಲ ಲೋಕಪಾಲ : ಇತರೆ 8 ಸದಸ್ಯರ ನೇಮಕ
ಅಲ್ಲದೇ ಕೆಲವರು ಚುನಾವಣೆ ಹಿನ್ನೆಲೆಯಲ್ಲಿ ಲೋಕಪಾಲ್ ನೇಮಕವಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ಲೋಕಪಾಲ್ ನೇಮಕವಾಗದೇ ಇದ್ದಿದ್ದರೆ ಶಿಕ್ಷೆಗೆ ಗುರಿಯಾಗುತ್ತಿದ್ದರು ಎಂದು ಹಾಸನದಲ್ಲಿ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಭ್ರಷ್ಟಾಚಾರ ನಿಯಂತ್ರಣಕ್ಕೆ ಲೋಕಪಾಲ ಸಂಸ್ಥೆಯನ್ನು ಕಾಯ್ದೆಬದ್ಧವಾಗಿ ಸ್ಥಾಪಿಸಿ ಐದು ವರ್ಷ ಕಳೆದರೂ ಲೋಕಪಾಲರ ನೇಮಿಸದೇ ಟೀಕೆ ಎದುರಿಸುತ್ತಿದ್ದ ಕೇಂದ್ರ ಸರ್ಕಾರ ಕಳೆದ ಕೆಲ ದಿನಗಳ ಹಿಂದಷ್ಟೇ ಪಿ.ಸಿ ಘೋಷ್ ಅವರನ್ನು ದೇಶದ ಮೊದಲ ಲೋಕಪಾಲರಾಗಿ ನೇಮಕ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.