2019 ಲೋಕಸಭಾ ಚುನಾವಣೆ: ಬಿಜೆಪಿಗೆ ಪ್ರಬಲ ಸ್ಪರ್ಧಿಗಳೇ ಇಲ್ಲ!

Published : Dec 11, 2018, 05:16 PM IST
2019 ಲೋಕಸಭಾ ಚುನಾವಣೆ: ಬಿಜೆಪಿಗೆ ಪ್ರಬಲ ಸ್ಪರ್ಧಿಗಳೇ ಇಲ್ಲ!

ಸಾರಾಂಶ

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದೆ. ಮೋದಿ ಅಂಡ್ ಟೀಂಗೆ ತಲೆನೊವು ಶುರುವಾಗಿದೆ. ಚುನಾವಣೆ ಗೆಲ್ಲುವುದು ಹೇಗೆ ಎಂಬ ಲೆಕ್ಕಾಚಾರ ಶುರುವಾಗಿದೆ. ಏತನ್ಮಧ್ಯೆ  ಬಿಜೆಪಿಯಿಂದ ಪ್ರಬಲ ಅಭ್ಯರ್ಥಿಗಳೇ ಇಲ್ಲದಂತಾಗಿದೆ.  

ನವದೆಹಲಿ (ಡಿ. 11):  2019 ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಒಬ್ಬರು ಬಿಟ್ಟರೆ ಲೋಕಸಭೆಗೆ ಸ್ಪರ್ಧೆ ಮಾಡುವ ಬಿಜೆಪಿಯ ಹೆವಿ ವೇಟ್‌ಗಳು ಯಾರು ಎಂದು ನೋಡಿದಾಗ ಕಾಣುವುದು ಎರಡೇ ಹೆಸರು. ಒಬ್ಬರು ರಾಜನಾಥ್ ಸಿಂಗ್, ಇನ್ನೊಬ್ಬರು ನಿತಿನ್ ಗಡ್ಕರಿ. ಅಡ್ವಾಣಿ, ಜೋಶಿ, ಕಲರಾಜ್ ಮಿಶ್ರಾ ವಯಸ್ಸಿನ ಕಾರಣದಿಂದ ಸ್ಪರ್ಧಿಸೋದು ಅನುಮಾನ.

ಆರ್‌ಬಿಐ: ನೆಹರು ಮಾಡಿದ್ದನ್ನೇ ಮಾಡಿದ ಮೋದಿ ಮೇಲೇಕೆ ಕಣ್ಣು? 

ಅಧಿಕಾರದಲ್ಲಿರುವುದರಿಂದ ಯೋಗಿ ಮತ್ತು ಮೌರ್ಯ ಸ್ಪರ್ಧಿಸೋದಿಲ್ಲ. ಸುಷ್ಮಾ ಸ್ವರಾಜ್ ಸ್ಪರ್ಧಿಸೋದಿಲ್ಲ. ಆರೋಗ್ಯ ನೋಡಿದರೆ ಜೇಟ್ಲಿ ಸಾಹೇಬರೂ ಇಲ್ಲ. ಚುನಾವಣಾ ಉಸ್ತುವಾರಿ ನೋಡಬೇಕಾದ ಅಮಿತ್ ಶಾ ಇದರಿಂದ ದೂರವೇ. ಸತತವಾಗಿ ಗೆದ್ದು ಬರುತ್ತಿದ್ದ ಅನಂತಕುಮಾರ್ ಮತ್ತು ಗೋಪಿನಾಥ್ ತೀರಿಕೊಂಡಿದ್ದಾರೆ. ಯಡಿಯೂರಪ್ಪನವರೂ ಸ್ಪರ್ಧಿಸೋದಿಲ್ಲ.

ಸುಪ್ರೀಂ ಜಡ್ಜ್ ಕೊಠಡಿ ಹೊಕ್ಕು ಅಲ್ಲಿ ಇಲ್ಲಿ ನೋಡಿದ್ದ ಮೋದಿ!

ನಾಲ್ಕೂವರೆ ವರ್ಷ ಅಧಿಕಾರ ಉಂಡಿರುವ ಧರ್ಮೇಂದ್ರ ಪ್ರಧಾನ್, ಪಿಯೂಷ್ ಗೋಯಲ್, ನಿರ್ಮಲಾ ಸೀತರಾಮನ್, ಜೆ ಪಿ ನಡ್ಡಾ, ಭೂಪೇಂದ್ರ ಯಾದವ್, ಅನಿಲ್ ಜೈನ್ ರಾಜ್ಯಸಭೆಯಲ್ಲಿ ಆರಾಮವಾಗಿದ್ದಾರೆ. ಅವರೇನೂ ಕೈಕೆಸರು ಮಾಡಿಕೊಳ್ಳುವ ಮೂಡ್‌ನಲ್ಲಿ ಇಲ್ಲ.

ದೇಶಕ್ಕೆ ಯೋಗಾಸನ ಮಾಡಿಸುವ ಮೋದಿಗೆ ಇವರು ಶೀರ್ಷಾಸನ ಮಾಡಿಸುತ್ತಾರೆ!

ದಿಲ್ಲಿ ಅಧಿಕಾರದ ವಿಚಿತ್ರ ಏನಪ್ಪಾ ಎಂದರೆ, ಸೂತ್ರದಾರರೇ ಕೈಬಾಯಿ ಕೆಸರಿಸದೆ ಬೊಂಬೆ ಆಡಿಸೋದು. ಅವರಿಗೆಲ್ಲ ಕಾಂಗ್ರೆಸ್ ಇರಲಿ, ಬಿಜೆಪಿ ಇರಲಿ ಸುಲಭವಾಗಿ ಕ್ಯಾಬಿನೆಟ್ ಹುದ್ದೆ ಬೇಕಷ್ಟೆ. ಮಣ್ಣಲ್ಲಿ ಹೊರಳಾಡಿ, ಪೆಟ್ಟು ತಿಂದು, ಕೇಸ್ ಹಾಕಿಸಿಕೊಂಡು, ಜನರಿಂದ ಬೈಸಿಕೊಂಡು, ದುಡ್ಡು ಖರ್ಚು ಮಾಡಿ ಒಮ್ಮೆ ಎಂಪಿ ಆಗುವುದೇ ಸಾಕು ಬೇಕಾಗಿರುತ್ತದೆ.

-ಪ್ರಶಾಂತ್ ನಾತು, ಸುವರ್ಣ ನ್ಯೂಸ್ ದೆಹಲಿ ಪ್ರತಿನಿಧಿ 

ರಾಜಕಾರಣದ ಸುದ್ದಿಗಾಗಿ ಇಂಡಿಯಾ ಗೇಟ್  ಕ್ಲಿಕ್ ಮಾಡಿ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸುವುದು ಕಾಂಗ್ರೆಸ್‌ನವರಿಗೆ ಇಷ್ಟವಿಲ್ಲ: ಎಚ್.ಡಿ.ಕುಮಾರಸ್ವಾಮಿ
ರೈತರಿಗೆ ಅನುಕೂಲ ಮಾಡುವುದೇ ಗುರಿ: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್