
ರಾಯಚೂರು: ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ನಟಿ ಸುಮಲತಾ ಅಂಬರೀಶ್ ಸ್ಪರ್ಧಿಸಿದಲ್ಲಿ ಕೇವಲ ನಾನು ಮಾತ್ರವಲ್ಲ ಇಡೀ ಚಿತ್ರರಂಗ ಬೆಂಬಲಿಸುತ್ತದೆ ಎಂದು ನಟ, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ನಟ ದೊಡ್ಡಣ್ಣ ತಿಳಿಸಿದರು.
ಮಂತ್ರಾಲಯದ ರಾಯರ ಗುರು ವೈಭವೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಶ್ರೀಮಠಕ್ಕೆ ಭೇಟಿ ನೀಡಿದ್ದ ವೇಳೆ ರಾಕ್ಲೈನ್ ವೆಂಕಟೇಶ್ ಸುದ್ದಿಗಾರರೊಂದಿಗೆ ಮಾತನಾಡಿ, ಯಾವುದೇ ಕಾರಣಕ್ಕೂ ನಾನು ರಾಜಕೀಯಕ್ಕೆ ಬರುವುದಿಲ್ಲ.
ಆದರೆ, ಅಂಬರೀಷ್ ಕುಟುಂಬ ನಮಗೆ ಮುಖ್ಯ. ಆ ಕುಟುಂಬ ಎಲ್ಲಿರುವುದೋ ನಾನು ಅಲ್ಲೇ ಇರುತ್ತೇನೆ. ಸುಮಲತಾರಿಗೆ ನನ್ನ ಬೆಂಬಲ ಸದಾ ಇರಲಿದೆ ಎಂದರು.
ಹಿರಿಯ ನಟ ದೊಡ್ಡಣ್ಣ ಮಾತನಾಡಿ, ಚಿತ್ರರಂಗದ ಮೇಲೆ ಅಂಬರೀಷ್ ಕುಟುಂಬದ ಋಣ ಸಾಕಷ್ಟಿದೆ. ಅದನ್ನು ತೀರಿಸಲಾದರೂ ನಾವೆಲ್ಲ ಸುಮಲತಾ ಅವರಿಗೆ ಬೆಂಬಲ ನೀಡುತ್ತೇವೆ. ಅವರ ಅನುಕೂಲಕ್ಕೆ ತಕ್ಕಂತೆ ನಾವು ಪ್ರಚಾರ ನಡೆಸುವುದಾಗಿ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.