ಮೋದಿ ವಿರುದ್ಧ ತಿರುಗಿ ಬಿದ್ರಾ ಬಾಬಾ ರಾಮ್‌ದೇವ್?

Published : Dec 27, 2018, 09:59 AM IST
ಮೋದಿ ವಿರುದ್ಧ ತಿರುಗಿ ಬಿದ್ರಾ ಬಾಬಾ ರಾಮ್‌ದೇವ್?

ಸಾರಾಂಶ

ಮೋದಿ ಜಪ ನಿಲ್ಲಿಸಿದ ಬಾಬಾ ರಾಮದೇವ್‌ |  ಮುಂದಿನ ಪ್ರಧಾನಿ ಯಾರೆಂದು ಹೇಳಲು ಸಾಧ್ಯವಿಲ್ಲ |  2019ರ ಚುನಾವಣೆಯಲ್ಲಿ ಯಾರನ್ನೂ ಬೆಂಬಲಿಸಲ್ಲ ಎಂದ ರಾಮ್‌ದೇವ್   

ಮದುರೈ (ಡಿ. 27):  ಈವರೆಗೆ ‘ಮೋದಿ ಜಪ’ ಮಾಡುತ್ತಿದ್ದ ಯೋಗಗುರು ಬಾಬಾ ರಾಮದೇವ್‌ ಅವರು ಈಗ ರಾಗ ಬದಲಿಸಿದ್ದು, ‘2019ನೇ ಸಾಲಿನ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಎಂದು ಹೇಳಲಾಗದು. ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎನ್ನುವುದರ ಬಗ್ಗೆ ಸದ್ಯ ಖಚಿತವಾಗಿ ನುಡಿಯಲು ಅಸಾಧ್ಯ’ ಎಂದು ಹೇಳಿದ್ದಾರೆ.

ತಮಿಳುನಾಡಿನ ಮದುರೈನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಬಾಬಾ, ‘2019ರ ಲೋಕಸಭೆ ಚುನಾವಣೆ ತುಂಬಾ ಕುತೂಹಲಕಾರಿಯಾಗಿದೆ. ಸುಲಭವಾಗಿ ಲೋಕಸಭಾ ಚುನಾವಣೆಯ ಗೆಲುವಿನ ಬಗ್ಗೆ ಹೇಳುವುದು ಕಷ್ಟ. ಸದ್ಯ ದೇಶದ ರಾಜಕೀಯ ಸ್ಥಿತಿಗತಿ ಅತ್ಯಂತ ಸ್ಪರ್ಧಾತ್ಮಕವಾಗಿದೆ. ಪರಿಸ್ಥಿತಿಯ ಸ್ಪಷ್ಟತೆ ಸಿಗುತ್ತಿಲ್ಲ’ ಎಂದರು.

ಅಲ್ಲದೆ, ‘ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಾವು ಯಾರಿಗೂ ಕೂಡ ಬೆಂಬಲ ನೀಡುವುದಿಲ್ಲ. ವಿರೋಧವಾಗಿಯೂ ನಿಲ್ಲುವುದಿಲ್ಲ. ರಾಜಕೀಯದ ಬಗ್ಗೆ ತಮ್ಮ ಗಮನವನ್ನೂ ಹರಿಸುವುದಿಲ್ಲ’ ಎಂದು ಸ್ಪಷ್ಟವಾಗಿ ಹೇಳಿದರು.

‘ನಮ್ಮ ಗುರಿ ಏನಿದ್ದರೂ ಹಿಂದೂ ರಾಷ್ಟ್ರ ನಿರ್ಮಾಣ ಹಾಗೂ ಯೋಗದ ಮೂಲಕ ಜಗತ್ತಿನಲ್ಲಿ ಆಧ್ಯಾತ್ಮಿಕತೆಯನ್ನು ಭಿತ್ತುವುದೇ ಆಗಿದೆ’ ಎಂದು ಬಾಬಾ ನುಡಿದರು.

2014ರ ಲೋಕಸಭೆ ಚುನಾವಣೆಯಲ್ಲಿ ಬಾಬಾ ರಾಮದೇವ್‌ ಅವರು ನರೇಂದ್ರ ಮೋದಿ ಅವರನ್ನು ಬಹಿರಂಗವಾಗಿ ಬೆಂಬಲಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭ್ರಷ್ಟ ಅಧಿಕಾರಿಗೆ ಬಿಗ್ ಶಾಕ್; 4 ವರ್ಷ ಜೈಲು ಶಿಕ್ಷೆ, 51 ಲಕ್ಷಕ್ಕೂ ಅಧಿಕ ಅಕ್ರಮ ಆಸ್ತಿ ಮುಟ್ಟುಗೋಲು!
Discover Koppal: ವಿಶ್ವದ ಗಮನ ಸೆಳೆಯಲಿದೆ ಹಿರೇಬೆಣಕಲ್: ಡಿಸ್ಕವರ್ ಕೊಪ್ಪಳಕ್ಕೆ ಡಿಸಿ ವಿದ್ಯುಕ್ತ ಚಾಲನೆ