
ನವದೆಹಲಿ[ಜೂ.12]: ಲೋಕಸಭೆ ಚುನಾವಣೆಯಲ್ಲಿನ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಅಧ್ಯಕ್ಷ ಹುದ್ದೆ ತೊರೆಯಲು ಮುಂದಾಗಿರುವ ರಾಹುಲ್ ಗಾಂಧಿ ತಮ್ಮ ನಿರ್ಧಾರವನ್ನು ಬದಲಿಸದೇ ಹೋದಲ್ಲಿ ಹಂಗಾಮಿ ಅಧ್ಯಕ್ಷರೊಬ್ಬರನ್ನು ಕಾಂಗ್ರೆಸ್ ಪಕ್ಷ ನೇಮಕ ಮಾಡುವ ಲಕ್ಷಣಗಳು ಕಂಡುಬರುತ್ತಿವೆ.
ಹಿರಿಯ ನಾಯಕರೊಬ್ಬರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ, ಅವರ ನೇತೃತ್ವದಲ್ಲಿ ಹಲವು ನಾಯಕರು ಸಭೆ ಸೇರಿ, ಪಕ್ಷಕ್ಕೆ ಸಂಬಂಧಿಸಿದಂತೆ ಸಾಮೂಹಿಕವಾಗಿ ನಿರ್ಧಾರಗಳನ್ನು ಕೈಗೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತರುವ ಅಭಿಪ್ರಾಯ ಪಕ್ಷದಲ್ಲಿ ವ್ಯಕ್ತವಾಗಿದೆ.
ಈ ನಡುವೆ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಗುಲ್ಬರ್ಗ ಲೋಕಸಭಾ ಕ್ಷೇತ್ರದಲ್ಲಿ ಪರಾಭವಗೊಂಡಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕನ ಸ್ಥಾನವನ್ನು ವಹಿಸಿಕೊಳ್ಳುವಂತೆ ರಾಹುಲ್ ಗಾಂಧಿ ಅವರಿಗೆ ಪಕ್ಷದ ನಾಯಕರು ಒತ್ತಡ ಹೇರುತ್ತಿದ್ದಾರೆ. ಜೂ.17ರಿಂದ ಸಂಸತ್ ಅಧಿವೇಶನ ಆರಂಭವಾಗುತ್ತಿದೆಯಾದರೂ ಈವರೆಗೆ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿನ ತನ್ನ ನಾಯಕನನ್ನು ಆಯ್ಕೆ ಮಾಡಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.