ಐಟಿ ದಾಳಿ ಬಳಿಕ ಚಿಕ್ಕರಾಯಪ್ಪ ಗಾಯಬ್: ಪತ್ತೆಗಾಗಿ ಲುಕ್ ಔಟ್ ನೋಟಿಸ್ ಜಾರಿ!

Published : Dec 23, 2016, 07:05 AM ISTUpdated : Apr 11, 2018, 12:41 PM IST
ಐಟಿ ದಾಳಿ ಬಳಿಕ ಚಿಕ್ಕರಾಯಪ್ಪ ಗಾಯಬ್: ಪತ್ತೆಗಾಗಿ ಲುಕ್ ಔಟ್ ನೋಟಿಸ್ ಜಾರಿ!

ಸಾರಾಂಶ

ಚಿಕ್ಕರಾಯಪ್ಪ ಮನೆ ಮೆಲೆ ಐಟಿ ದಾಳಿಗೆ ಸಂಬಂಧಪಟ್ಟಂತೆ ತನಿಖೆ ಮುಂದುವರೆದಿದೆ. ಆದರೆ ಭ್ರಷ್ಟ ಅಧಿಕಾರಿಗಳ ಚಿಕ್ಕರಾಯಪ್ಪ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಜಾರಿ ನಿರ್ದೇಶನಾಲಯ ಇವರನ್ನು ಹುಡುಕುವ ಪ್ರಯತ್ನ ನಡೆಸುತ್ತಿದ್ದು, ಚಿಕ್ಕರಾಯಪಗಪ ವಿರುದ್ಧ ಲುಕ್ ಔಟ್ ನೋಟೀಸ್ ಜಾರಿಯಾಗಿದೆ.

ಬೆಂಗಳೂರು(ಡಿ.23): ಚಿಕ್ಕರಾಯಪ್ಪ ಮನೆ ಮೆಲೆ ಐಟಿ ದಾಳಿಗೆ ಸಂಬಂಧಪಟ್ಟಂತೆ ತನಿಖೆ ಮುಂದುವರೆದಿದೆ. ಆದರೆ ಭ್ರಷ್ಟ ಅಧಿಕಾರಿಗಳ ಚಿಕ್ಕರಾಯಪ್ಪ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಜಾರಿ ನಿರ್ದೇಶನಾಲಯ ಇವರನ್ನು ಹುಡುಕುವ ಪ್ರಯತ್ನ ನಡೆಸುತ್ತಿದ್ದು, ಚಿಕ್ಕರಾಯಪ್ಪ ವಿರುದ್ಧ ಲುಕ್ ಔಟ್ ನೋಟೀಸ್ ಜಾರಿಯಾಗಿದೆ.

ಚಿಕ್ಕರಾಯಪ್ಪ ವಿರುದ್ಧ ಇಡಿ ಅಧಿಕಾರಿಗಳು FIR ದಾಖಲಿಸಿಕೊಂಡಿದ್ದು, ಸದ್ಯ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಚಿಕ್ಕರಾಯಪ್ಪನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ ಅಧಿಕಾರಿಗಳಿಗೆ ಚಿಕ್ಕರಾಯಪ್ಪ ವಿರುದ್ಧದ ಲುಕ್ ಔಟ್ ನೋಟೀಸ್ ಕಳುಹಿಸಿರುವ ಇಡಿ ಅಧಿಕಾರಿಗಳು ಪೊಲೀಸ್ ಇಲಾಖೆಗೂ ಈ ಕುರಿತಾಗಿ ಮಾಹಿತಿ ಸಿಕ್ಕರೆ ತಿಳಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಚಿಕ್ಕರಾಯಪ್ಪ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಅಪಾರ ಮೌಲ್ಯದ ಹಣ ಹಾಗೂ ಸಂಪತ್ತನ್ನು ವಶಪಡಿಸಿಕೊಂಡಿದ್ದರು. ದಾಳಿಯ ಬಳಿಕ ಚಿಕ್ಕರಾಯಪ್ಪ ತಲೆ ಮರೆಸಿಕೊಂಡಿದ್ದರು. ಇವರಿಗಾಗಿ ತೀವ್ರ ಶೋಧ ನಡೆಸಿದ ಬಳಿಕವೂ ಪತ್ತೆಯಾಗದ ಹಿನ್ನೆಲೆಯಲ್ಲಿ ಇದೀಗ ಲುಕ್ ಔಟ್ ನೋಟೀಸ್ ಜಾರಿಗೊಳಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಿಕ್ಷಕರ, ಶಿಕ್ಷಣ ಸಂಸ್ಥೆಗಳ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವೆ: ಸಚಿವ ಮಧು ಬಂಗಾರಪ್ಪ
ಡಿಕೆಶಿ ಕುಂಡಲಿಯಲ್ಲಿ ಷಷ್ಠ ಸ್ಥಾನದಲ್ಲಿ ಶನಿ: ರಾಜಕೀಯ ಭವಿಷ್ಯವೇನು? CM ಖುರ್ಚಿ ಯಾರಿಗೆ? ಭೈರವಿ ಅಮ್ಮ ಸ್ಫೋಟಕ ನುಡಿ